ಬಿಲ್ಕಿಸ್ ಬಾನು ಪ್ರಕರಣ: ನ್ಯಾಯ ಸಿಕ್ಕಿದೆ ಎಂದ ಪ್ರಮುಖ ಸಾಕ್ಷಿದಾರ,ಸಂಭ್ರಮಾಚರಣೆ

Prasthutha|

ದಾಹೋದ್: ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳಿಗೆ ಕ್ಷಮಾಪಣೆ ನೀಡಿ ಅವಧಿಪೂರ್ವ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಮುಖ ಸಾಕ್ಷಿದಾರ ಶ್ಲಾಘಿಸಿದ್ದು, ಬಾನು ಅವರಿಗೆ ಇಂದು ನ್ಯಾಯ ಸಿಕ್ಕಿದೆ ಎಂದಿದ್ದಾರೆ.

- Advertisement -

ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದೆ ಮತ್ತು ಅಪರಾಧಿಗಳನ್ನು ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಕೇಳಿದ್ದರಿಂದ ನನಗೆ ಸಂತೋಷವಾಗಿದೆ. ಇಂದು ನಮಗೆ ನ್ಯಾಯ ಸಿಕ್ಕಿದೆ ಎಂದು ನಾನು ಭಾವಿಸುತ್ತೇನೆ ಎಂದು ಸದ್ಯ ದೇವಗಡ ಬರಿಯಾ ಪಟ್ಟಣದಲ್ಲಿ ವಾಸಿಸುತ್ತಿರುವ ಪ್ರಕರಣದ ಸಾಕ್ಷಿಗಳಲ್ಲಿ ಒಬ್ಬರಾದ ಅಬ್ದುಲ್ ರಝಾಕ್ ಮನ್ಸೂರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇನ್ನೊಂದೆಡೆ ದಾಹೋದ್ ಜಿಲ್ಲೆಯ ದೇವಗಢ್ ಬರಿಯಾ ಪಟ್ಟಣದಲ್ಲಿ ಬಿಲ್ಕೀಸ್ ಬಾನು ಸಂಬಂಧಿಕರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

Join Whatsapp