ಬಿಲ್ಲವರ ಪ್ರತಿಭಟನೆ| ವೇಣೂರು ದೇವಾಲಯದ ಕಾರ್ಯಕ್ರಮದಿಂದ ರೋಹಿತ್ ಚಕ್ರತೀರ್ಥ ಔಟ್

Prasthutha|

ಬೆಳ್ತಂಗಡಿ: ಬಿಲ್ಲವ ಸಮುದಾಯದ ಭಾರೀ ವಿರೋಧ ಹಿನ್ನೆಲೆಯಲ್ಲಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ರೋಹಿತ್ ಚಕ್ರತೀರ್ಥರನ್ನು ಆಹ್ವಾನಿಸುವ ವಿಚಾರ ಕೈಬಿಡಲಾಗಿದೆ.

- Advertisement -

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲು ವಿವಾದಿತ ವ್ಯಕ್ತಿ ರೋಹಿತ್ ಚಕ್ರತೀರ್ಥರನ್ನು ಶಾಸಕ ಹರೀಶ್ ಪೂಂಜಾ ಅಧ್ಯಕ್ಷರಾಗಿರುವ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಆಹ್ವಾನಿಸಿತ್ತು. ಆದರೆ ಈ ನಿರ್ಧಾರಕ್ಕೆ ವಿವಿಧ ಬಿಲ್ಲವ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ರೋಹಿತ್ ಕಾರ್ಯಕ್ರಮಕ್ಕೆ ಆಗಮಿಸಿದರೆ ಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಕೆ ನೀಡಲಾಗಿತ್ತು.

Join Whatsapp