ಬಂಟ್ವಾಳ: ಕುಂಡಡ್ಕ ದೈವಸ್ಥಾನಕ್ಕೆ ಬಿಲ್ಲವರಿಗೆ ಪ್ರವೇಶ ನಿಷೇಧ ?

Prasthutha|

ಬಂಟ್ವಾಳ: ದೈವಸ್ಥಾನಕ್ಕೆ ಪ್ರಾರ್ಥನೆಗೆಂದು ತೆರಳಿದ್ದ ಬಿಲ್ಲವ ಸಮುದಾಯದ ಯುವಕರನ್ನು ಹೊರಗೆ ಕಳುಹಿಸಿದ ಘಟನೆ ವಿಟ್ಲ ಮೂಡ್ನೂರು ಗ್ರಾಮದ ಕುಂಡಡ್ಕ ಎಂಬಲ್ಲಿ ನಡೆದಿರುವ ಬಗ್ಗೆ ಆರೋಪ ಕೇಳಿ ಬಂದಿದೆ.

- Advertisement -

ಬಂಟ್ವಾಳದ ಪಿಲಿಂಜ ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡ ದೈವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಪ್ರಾರ್ಥನೆ ಸಲ್ಲಿಸಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಬ್ರಹ್ಮಕಲಶೋತ್ಸನ ಸಮಿತಿ ಅಧ್ಯಕ್ಷರ ಜತೆ ಬಿಲ್ಲವ ಸಮುದಾಯದ ಇಬ್ಬರು ಯುವಕರು ಇತರರೊಂದಿಗೆ ತೆರಳಿದ್ದು, ದೈವಸ್ಥಾನದ ಉಸ್ತುವಾರಿ, ಅಧ್ಯಕ್ಷರ ಜೊತೆ ಮಾತನಾಡಿ ದೈವಸ್ಥಾನದ ಒಳಾಂಗಣಕ್ಕೆ ಬಿಲ್ಲವರು ಬರುವಂತಿಲ್ಲ ಎಂದಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

- Advertisement -

ದೈವಸ್ಥಾನಕ್ಕೆ ಪ್ರವೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಲ್ಲವ ಯುವಕರು ಬಿಲ್ಲವ ಸಮುದಾಯದ ಮುಖಂಡರಿಗೆ ಈ ಸಂಬಂಧ ದೂರು ನೀಡಿದ್ದಾರೆ. ಮಾತ್ರವಲ್ಲ ಈ ಕುರಿತ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು.

ಈ ನಡುವೆ ಇನ್ನು ಮುಂದಕ್ಕೆ ದೈವಸ್ಥಾನಕ್ಕೆ ಬಿಲ್ಲವರು ಪ್ರವೇಶಿಸುವುದನ್ನು ನಿರ್ಬಂಧಿಸಿದರೆ ತೀವ್ರ ರೀತಿಯ ಪ್ರತಿಭಟನೆ, ಹೋರಾಟ ನಡೆಸುವ ಕುರಿತು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

Join Whatsapp