Home ಕರಾವಳಿ ಬಂಟ್ವಾಳ: ಕುಂಡಡ್ಕ ದೈವಸ್ಥಾನಕ್ಕೆ ಬಿಲ್ಲವರಿಗೆ ಪ್ರವೇಶ ನಿಷೇಧ ?

ಬಂಟ್ವಾಳ: ಕುಂಡಡ್ಕ ದೈವಸ್ಥಾನಕ್ಕೆ ಬಿಲ್ಲವರಿಗೆ ಪ್ರವೇಶ ನಿಷೇಧ ?

ಬಂಟ್ವಾಳ: ದೈವಸ್ಥಾನಕ್ಕೆ ಪ್ರಾರ್ಥನೆಗೆಂದು ತೆರಳಿದ್ದ ಬಿಲ್ಲವ ಸಮುದಾಯದ ಯುವಕರನ್ನು ಹೊರಗೆ ಕಳುಹಿಸಿದ ಘಟನೆ ವಿಟ್ಲ ಮೂಡ್ನೂರು ಗ್ರಾಮದ ಕುಂಡಡ್ಕ ಎಂಬಲ್ಲಿ ನಡೆದಿರುವ ಬಗ್ಗೆ ಆರೋಪ ಕೇಳಿ ಬಂದಿದೆ.

ಬಂಟ್ವಾಳದ ಪಿಲಿಂಜ ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡ ದೈವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಪ್ರಾರ್ಥನೆ ಸಲ್ಲಿಸಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಬ್ರಹ್ಮಕಲಶೋತ್ಸನ ಸಮಿತಿ ಅಧ್ಯಕ್ಷರ ಜತೆ ಬಿಲ್ಲವ ಸಮುದಾಯದ ಇಬ್ಬರು ಯುವಕರು ಇತರರೊಂದಿಗೆ ತೆರಳಿದ್ದು, ದೈವಸ್ಥಾನದ ಉಸ್ತುವಾರಿ, ಅಧ್ಯಕ್ಷರ ಜೊತೆ ಮಾತನಾಡಿ ದೈವಸ್ಥಾನದ ಒಳಾಂಗಣಕ್ಕೆ ಬಿಲ್ಲವರು ಬರುವಂತಿಲ್ಲ ಎಂದಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ದೈವಸ್ಥಾನಕ್ಕೆ ಪ್ರವೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಲ್ಲವ ಯುವಕರು ಬಿಲ್ಲವ ಸಮುದಾಯದ ಮುಖಂಡರಿಗೆ ಈ ಸಂಬಂಧ ದೂರು ನೀಡಿದ್ದಾರೆ. ಮಾತ್ರವಲ್ಲ ಈ ಕುರಿತ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು.

ಈ ನಡುವೆ ಇನ್ನು ಮುಂದಕ್ಕೆ ದೈವಸ್ಥಾನಕ್ಕೆ ಬಿಲ್ಲವರು ಪ್ರವೇಶಿಸುವುದನ್ನು ನಿರ್ಬಂಧಿಸಿದರೆ ತೀವ್ರ ರೀತಿಯ ಪ್ರತಿಭಟನೆ, ಹೋರಾಟ ನಡೆಸುವ ಕುರಿತು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

Join Whatsapp
Exit mobile version