ಜೈಲಿನಲ್ಲಿ ಹುಟ್ಟುಹಬ್ಬ ಆಚರಣೆ: ಪ್ರಕರಣ ದಾಖಲು

Prasthutha|

ಬೆಂಗಳೂರು: ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಹುಟ್ಟುಹಬ್ಬ  ಆಚರಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಕೈದಿಗಳ ಮೇಲೆ ಪ್ರಕರಣ ದಾಖಲಾಗಿದೆ.

- Advertisement -

ಕುಖ್ಯಾತ ರೌಡಿ ಕಿರಣ್ ಅಲಿಯಾಸ್ ತಮಟೆ ಹುಟ್ಟುಹಬ್ಬವನ್ನು ಜೈಲಿನಲ್ಲೇ ಆಚರಿಸಿ ಕೇಕ್ ಕತ್ತರಿಸಲಾಗಿತ್ತು.

ಕೈದಿಗಳು ಹುಟ್ಟುಹಬ್ಬ ಆಚರಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ  ಹಂಚಿಕೊಳ್ಳಲಾಗಿತ್ತು. ಕೇಕ್ ಕತ್ತರಿಸಿ, ಹ್ಯಾಪಿ ಬರ್ತ್ ಡೇ ಕಿರಣ್ ಅಣ್ಣ ಎಂದು ಹೂವಿನಲ್ಲಿ ಬರೆದು ಗ್ರೂಪ್ ಫೋಟೋ ತೆಗೆದುಕೊಂಡಿರುವ ಎರಡು ಫೋಟೋಗಳು ವೈರಲ್ ಆಗಿತ್ತು.

- Advertisement -

ಕೈದಿಗಳು ಹುಟ್ಟುಹಬ್ಬ ಆಚರಿಸಿಕೊಳ್ಳಲು ಜೈಲಿನ ಅಧಿಕಾರಿಗಳೇ ಸಾಥ್ ನೀಡಿದ್ದಾರೆ ಎಂಬ ಆರೋಪಗಳು ಸಹ ಕೇಳಿಬಂದಿದೆ. ಅಲ್ಲದೇ ಜೈಲಿನ ಒಳಗಡೆ ಕೇಕ್ ತೆಗೆದುಕೊಂಡು ಹೋಗಲು ಅಧಿಕಾರಿ, ಸಿಬ್ಬಂದಿಗಳೇ ಸಾಥ್ ನೀಡಿದ್ದಾರೆ ಎನ್ನಲಾಗುತ್ತಿದೆ.

ಇನ್ನೂ ಜೈಲಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ರಾಮನಗರ ಎಸ್ಪಿ ಸಂತೋಷ್ ಬಾಬು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಎರಡು ಮೊಬೈಲ್ ಫೋನ್‍ ಗಳನ್ನು ವಶಕ್ಕೆ ಪಡೆದು ಹುಟ್ಟುಹಬ್ಬ ಆಚರಣೆ ಮಾಡಿಕೊಂಡ ಕಿರಣ್ ಹಾಗೂ ಆತನ ಸಂಗಡಿಗರ ವಿರುದ್ಧ ರಾಮನಗರ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಪ್ರಕರಣಕ್ಕೆ ಸಹಕಾರ ನೀಡಿದ ಜೈಲು ಸಿಬ್ಬಂದಿ ವಿರುದ್ಧ ತನಿಖೆಗೆ ಸೂಚಿಸಿದ್ದಾರೆ.

Join Whatsapp