ಜನಾಶೀರ್ವಾದ ಯಾತ್ರೆಯ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಬಂದೂಕು ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು

Prasthutha|

ಯಾದಗಿರಿ: ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ‘ಜನ ಆಶೀರ್ವಾದ ಯಾತ್ರೆ’ಯ ವೇಳೆ ಬಿಜೆಪಿ ಕಾರ್ಯಕರ್ತರು ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತ ಮಾಡಿರುವ ಘಟನೆ ಯರಗೋಳ ಬಳಿ ನಡೆದಿದೆ.

- Advertisement -


ಒಂದು ಸಾವಿರಕ್ಕೂ ಹೆಚ್ಚು ಜನರು ಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಮಾಸ್ಕ್, ದೈಹಿಕ ಅಂತರ ಕೂಡ ಕಾಪಾಡಿಕೊಳ್ಳದೆ ಭಾಗವಹಿಸಿದ್ದರು. ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಕಾರ್ಯಕರ್ತರು ಕೇಂದ್ರ ಸಚಿವರಿಗೆ ಸ್ವಾಗತ ಕೋರಿದ್ದಾರೆ. ಈ ಕುರಿತ ವೀಡಿಯೋ ವೈರಲ್ ಆಗಿದೆ.


ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ನೂರಾರು ಜನರು ಒಟ್ಟಿಗೆ ಜಮಾಯಿಸಿದ್ದು ವೀಡಿಯೋದಲ್ಲಿದೆ. ಈ ಬಗ್ಗೆ ಜಿಲ್ಲಾಡಳಿತ ಮೌನಕ್ಕೆ ಶರಣಾಗಿರುವುದರ ವಿರುದ್ಧ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.



Join Whatsapp