ನಿರುದ್ಯೋಗ, ಹಣದುಬ್ಬರ, ಚೀನಾದ ಒಳನುಸುಳುವಿಕೆಯ ಸಮಸ್ಯೆಗಳನ್ನು ಎತ್ತುತ್ತಿರುವ ರಾಹುಲ್ ಬಗ್ಗೆ ಬಿಜೆಪಿಗೆ ಭಯ: ಸುರ್ಜೇವಾಲಾ

Prasthutha|

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿರುವ ಬಗ್ಗೆ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ, ನಿರುದ್ಯೋಗ, ಹಣದುಬ್ಬರ ಮತ್ತು ಚೀನಾದ ಒಳನುಸುಳುವಿಕೆಯಂತಹ ವಿಷಯಗಳ ವಿರುದ್ಧ ಧ್ವನಿ ಎತ್ತುವ ಸಂಸದರ ಬಗ್ಗೆ ಕೇಂದ್ರ ಸರ್ಕಾರ ಹೆದರುತ್ತಿದೆ ಎಂದು ಮಂಗಳವಾರ ಟೀಕಿಸಿದ್ದಾರೆ.

- Advertisement -

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸುರ್ಜೇವಾಲಾ, “ರಾಹುಲ್ ಗಾಂಧಿ ಅವರ ಬಲವಾದ ಧ್ವನಿಗೆ ಬಿಜೆಪಿ ಏಕೆ ಹೆದರುತ್ತದೆ? ಚೀನಾ ನುಸುಳಿದಾಗ ಮತ್ತು ಸರ್ಕಾರವು ನಿರಾಕರಣೆಯ ಮೋಡ್ ನಲ್ಲಿದ್ದಾಗ, ರಾಹುಲ್ ಗಾಂಧಿ ಧ್ವನಿ ಎತ್ತಿದರು. ಇಂದಿಗೂ ಸಹ, ಸರ್ಕಾರವು ಚೀನಾವನ್ನು ಹೊರಹಾಕಲು ಸಾಧ್ಯವಾಗಲಿಲ್ಲ” ಎಂದು ಆರೋಪಿಸಿದರು.

Join Whatsapp