ರಾಜ್ಯಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ

Prasthutha|

ನವದೆಹಲಿ: ಮುಂಬರುವ ರಾಜ್ಯಸಭಾ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ, ರಾಜ್ಯ ಖಾತೆಯ ಕೇಂದ್ರ ಸಚಿವ ಎಲ್ ಮುರುಗನ್ ಅವರನ್ನು ಕ್ರಮವಾಗಿ ಅಸ್ಸಾಮ್ ಮತ್ತು ಮಧ್ಯಪ್ರದೇಶಕ್ಕೆ ಅಭ್ಯರ್ಥಿಗಳಾಗಿ ಘೋಷಿಸಿದೆ.

- Advertisement -

ಅಸ್ಸಾಮಿನ ಬಿಶ್ವಜಿತ್ ದೈಮರಿ ಮತ್ತು ಮಧ್ಯಪ್ರದೇಶದ ತವಾರ್ ಚಂದ್ ಗೆಹ್ಲೋಟ್ ಅವರ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯಸಭಾ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಈ ಮೇಲಿನ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ರಾಜ್ಯಸಭಾ ಸೀಟನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳಲು ಬಿಜೆಪಿ ಯೋಜನೆ ಹಮ್ಮಿಕೊಂಡಿದೆ.

Join Whatsapp