ಕುಮಾರಸ್ವಾಮಿಯವರ ಹಳೇ ಪ್ರಕರಣವನ್ನು ಮುನ್ನೆಲೆಗೆ ತಂದವರೇ ಬಿಜೆಪಿಯವರು: ಗುಂಡೂರಾವ್

Prasthutha|

ಹುಬ್ಬಳ್ಳಿ: ರಾಜ್ಯಪಾಲರು ತೆಗೆದುಕೊಳ್ಳುವ ನಿರ್ಧಾರದಿಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಲೆದಂಡ ಆಗಲಿದೆ. ಇದು ಬಿಜೆಪಿಯವರು ಮಾಡಿದ ಹುನ್ನಾರವಾಗಿದೆ. ಬಿಜೆಪಿಯವರಿಗೆ ಜೆಡಿಎಸ್ ಮುಗಿಸಬೇಕು ಎನ್ನುವ ಚಿಂತನೆ ಬಹಳ ದಿನಗಳಿಂದ ಇತ್ತು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದಿನಿಂದಲೂ ಬಿಜೆಪಿ ನಾಯಕರು ಜೆಡಿಎಸ್ ಮುಗಿಸಬೇಕು ಎನ್ನುವ ಹುನ್ನಾರ ಮಾಡಿದ್ದರು. ಇದೀಗ ಎಚ್.ಡಿ.ಕುಮಾರಸ್ವಾಮಿ ಅವರ ಹಳೇ ಪ್ರಕರಣವನ್ನು ಮುನ್ನೆಲೆಗೆ ತಂದವರೇ ಬಿಜೆಪಿಯವರು ಎಂದರು.


ಗಣಿ ಇಲಾಖೆಯಲ್ಲಿ ಹಿಂದೆ ಹಗರಣವಾಗಿತ್ತು. ಇದೀಗ ಕೇಂದ್ರದಲ್ಲಿ ಗಣಿ ಸಚಿವರಾಗಿದ್ದಾರೆ. ಹೀಗಾಗಿ ರಾಜ್ಯಪಾಲರು ತೆಗೆದುಕೊಳ್ಳುವ ನಿರ್ಧಾರದಿಂದ ಕುಮಾರಸ್ವಾಮಿ ಅವರ ತಲೆದಂಡ ಆಗಲಿದೆ. ಇದೀಗ ಅವರ ಸಹಿ ಫೋರ್ಜರಿ ಎಂದು ಹೇಳಿತ್ತಿದ್ದು, ಇಷ್ಟು ದಿನ ಯಾಕೆ ದೂರು ಕೊಟ್ಟಿಲ್ಲ ಎಂದು ಪ್ರಶ್ನಿಸಿದರು.



Join Whatsapp