Home ಟಾಪ್ ಸುದ್ದಿಗಳು ಬಿಜೆಪಿಯವರು ಲೋಪ ಮುಚ್ಚಲು ಚಡ್ಡಿ ಅಭಿಯಾನ ಮಾಡುತ್ತಿದ್ದಾರೆ: ವಿನಯ್ ಕುಮಾರ್ ಸೊರಕೆ

ಬಿಜೆಪಿಯವರು ಲೋಪ ಮುಚ್ಚಲು ಚಡ್ಡಿ ಅಭಿಯಾನ ಮಾಡುತ್ತಿದ್ದಾರೆ: ವಿನಯ್ ಕುಮಾರ್ ಸೊರಕೆ

ಉಡುಪಿ : ಬಿಜೆಪಿಯವರು ತಮ್ಮ ಲೋಪದೋಷಗಳನ್ನು ಮುಚ್ಚಿಹಾಕಲು ಚಡ್ಡಿ ಅಭಿಯಾನ ಮಾಡುತ್ತಿದ್ದಾರೆ. ಕೆಪಿಸಿಸಿ ಕಚೇರಿಗೆ ಚಡ್ಡಿ ಕಳಿಸುತ್ತಿದ್ದಾರೆ , ಜಿಲ್ಲಾ ಕಚೇರಿಗೆ ಕಳಿಸಿದ್ದರೆ ಸೂಕ್ತ ಬಟವಾಡೆ ಮಾಡುತ್ತಿದ್ದೆವು, ನಮ್ಮ ಕೈಗೆ ಇನ್ನೂ ಚಡ್ಡಿ ಸಿಗಲಿಲ್ಲ ಸಿಕ್ಕಿದರೆ ಬಟವಾಡೆ ಮಾಡುತ್ತೇವೆ ಎಂದು ಮಾಜಿ ಸಚಿವ ವಿನಯ್​ ಕುಮಾರ್​ ಸೊರಕೆ ಹೇಳಿದ್ದಾರೆ.

ಈ ಬಗ್ಗೆ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿನಯ್ ಕುಮಾರ್ ಸೊರಕೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಏನು ಮಾಡಿದರೂ ಅದಕ್ಕೊಂದು ತೂಕ ಇದೆ. ಸಿದ್ದರಾಮಯ್ಯ ಹೇಳಿಕೆಗೆ ಜಿಲ್ಲಾ ನಾಯಕರು ಪ್ರತಿಕ್ರಿಯೆ ಕೊಡುವುದಲ್ಲ. ಸಿದ್ದರಾಮಯ್ಯ ಮಾತನಾಡಿದರೆ ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಉತ್ತರ ಕೊಡಲಿ. ಆಡಳಿತ ನಡೆಸುವುದು ಹೇಗೆ ಎಂದು ಸಿದ್ದರಾಮಯ್ಯ ಬಳಿ ಕೇಳಿ ತಿಳಿದುಕೊಳ್ಳಲಿ ಎಂದು ಹೇಳಿದ್ದಾರೆ.

Join Whatsapp
Exit mobile version