ಬಿಜೆಪಿಗೆ ವಾಪಸ್ಸು ಹೋಗುವ ಪ್ರಶ್ನೆಯೇ ಉದ್ಭವಿಸದು: ಜಗದೀಶ್ ಶೆಟ್ಟರ್

Prasthutha|

- Advertisement -

ಬೆಂಗಳೂರು: ಬಿಜೆಪಿಯ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಮ್ಮನ್ನು ಭೇಟಿಯಾಗಿಲ್ಲ ಮತ್ತು ಭೇಟಿಯಾದರೂ ಬಿಜೆಪಿ ವಾಪಸ್ಸು ಹೋಗುವ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಳ್ಳು ವದಂತಿ, ಉದ್ದೇಶಪೂರ್ವಕವಾಗಿಯೇ ತಮ್ಮನ್ನು ಕುರಿತು ಸುಳ್ಳುಗಳನ್ನು ಹರಡುವ ಕೆಲಸ ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಕೆಲ ಬಿಜೆಪಿ ನಾಯಕರು ತಮ್ಮ ಸಂಪರ್ಕದಲ್ಲಿರೋದು ಅವರಿಗೆ ಗೊತ್ತಿದೆ, ಅವರನ್ನು ಅಧೀರರನ್ನಾಗಿಸಲು, ಅಂದರೆ ಕಾಂಗ್ರೆಸ್ ಸೇರುವುದನ್ನು ತಡೆಯಲು ಸುಳ್ಳು ವದಂತಿಗಳನ್ನು ಹರಿಬಿಡಲಾಗುತ್ತಿದೆ ಎಂದು ಶೆಟ್ಟರ್ ಹೇಳಿದರು.



Join Whatsapp
Exit mobile version