ವಾಜಪೇಯಿಯ ಪ್ರತಿಮೆ ಅನಾವರಣ ವೇಳೆ ಬಿಜೆಪಿ- ಕಾಂಗ್ರೆಸ್ ಮಧ್ಯೆ ಮಾರಾಮಾರಿ

Prasthutha|

ರಾಯ್ ಪುರ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯ 98ನೇ ಜಯಂತಿಯ ಪ್ರಯುಕ್ತ ಛತ್ತೀಸ್ ಗಢದಲ್ಲಿ ನಡೆದ  ಪ್ರತಿಮೆ ಅನಾವರಣ ಕಾರ್ಯಕ್ರಮದ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿದೆ.

- Advertisement -

ದುರ್ಗ್ ನಗರದ ಅಟಲ್ ಸ್ಮೃತಿ ಉದ್ಯಾನದಲ್ಲಿ ಬಿಜೆಪಿಯಿಂದ ವಾಜಪೇಯಿ ಅವರ ಪ್ರತಿಮೆ ನಿರ್ಮಾಣ ಮಾಡಲಾಗಿತ್ತು. ಭಾನುವಾರ ವಾಜಪೇಯಿ ಜನ್ಮ ದಿನದ ಹಿನ್ನೆಲೆಯಲ್ಲಿ ಪ್ರತಿಮೆಯನ್ನು ಉದ್ಘಾಟಿಸಲು ಬಿಜೆಪಿ ಮುಂದಾಗಿತ್ತು. ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಗಲಾಟೆ ಸಂಭವಿಸಿದೆ.

ಬಿಜೆಪಿ ಸಂಸದ ವಿಜಯ್ ಬಘೇಲ್ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಲು ಮುಂದಾದಾಗ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು.

- Advertisement -

ಇದರಿಂದ ಉಭಯ ಪಕ್ಷಗಳ ಕಾರ್ಯಕರ್ತರ ಮಧ್ಯೆ ತಳ್ಳಾಟ, ನೂಕಾಟ ಶುರುವಾಗಿ  ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿತ್ತು. ಬಳಿಕ ಪೊಲೀಸರು ತಡೆದು ಎಲ್ಲರನ್ನೂ ಚದುರಿಸಿದ್ದು, ಕಾನೂನು ಸುವ್ಯವಸ್ಥೆಗಾಗಿ ನಿಷೇಧಾಜ್ಞೆ ವಿಧಿಸಲಾಗಿದೆ.

ಮಾರಾಮಾರಿಯಿಂದಾಗಿ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನೇ ರದ್ದುಪಡಿಸಲಾಗಿದ್ದು, ಸ್ಥಳದಲ್ಲಿ ಪೊಲೀಸ್ ಬಿಗಿಬಂದೋಬಸ್ತ್ ಏರ್ಪಡಿಸಲಾಗಿದೆ.

Join Whatsapp