Home ಟಾಪ್ ಸುದ್ದಿಗಳು ಬಿಜೆಪಿಯ ರಾಜಕೀಯ ನಿರ್ಣಯಕ್ಕೆ ನಮ್ಮ ಸರ್ಕಾರ ರಾಜಕೀಯ ಉತ್ತರ ನೀಡಿದೆ: ಡಿಕೆ ಸುರೇಶ್

ಬಿಜೆಪಿಯ ರಾಜಕೀಯ ನಿರ್ಣಯಕ್ಕೆ ನಮ್ಮ ಸರ್ಕಾರ ರಾಜಕೀಯ ಉತ್ತರ ನೀಡಿದೆ: ಡಿಕೆ ಸುರೇಶ್

ಬೆಂಗಳೂರು: ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಸರ್ಕಾರ ರಾಜಕೀಯವಾಗಿ ತೆಗೆದುಕೊಂಡಿದ್ದ ನಿರ್ಣಯಕ್ಕೆ ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿಯೇ ಉತ್ತರ ಕೊಟ್ಟಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಇಡೀ ದೇಶದ ಸಂವಿಧಾನವನ್ನ ಬಿಗಿ ಮುಷ್ಠಿಯಲ್ಲಿ ಇಟ್ಟುಕೊಂಡಿದ್ದಾರೆ. ಕಳೆದ 9 ವರ್ಷದಿಂದ ಸಂವಿಧಾನ ವಿರೋಧಿ ಕೆಲಸ ಮಾಡ್ತಿದ್ದಾರೆ. ಸಾಂವಿಧಾನ ಹುದ್ದೆಯನ್ನ ದುರ್ಬಳಕೆ ಮಾಡ್ತಿದ್ದಾರೆ. ಕೇಸ್ ವಾಪಸ್ ಪಡೆದಿರೋದು ರಾಜ್ಯ ಸರ್ಕಾರದ ನಿರ್ಣಯ. ಇಡೀ ಕ್ಯಾಬಿನೆಟ್ ತೀರ್ಮಾನ. ಹಿಂದೆ ಡಿಕೆ ಶಿವಕುಮಾರ್ ಅವರನ್ನ ಸಿಲುಕಿಸಬೇಕು ಅಂತ ಅವರ ಹೈಕಮಾಂಡ್ ಮಾತು ಕೇಳಿ ಕೇಸ್ ಸಿಬಿಐಗೆ ಕೊಟ್ರು. ಡಿಕೆಶಿವಕುಮಾರ್ ಅವರನ್ನ ರಾಜಕೀಯ ದಾಳ ಮಾಡಿಕೊಳ್ಳಲು ಬಿಜೆಪಿ ಅವರು ಆತುರವಾಗಿ ತೀರ್ಮಾನ ಮಾಡಿದ್ದರು. ಬಿಜೆಪಿ ಮಾಡಿದ ಆತುರದ ತೀರ್ಮಾನವನ್ನು ಕ್ಯಾಬಿನೆಟ್ ಹಿಂಪಡೆದಿದೆ ಅಂತ ಸಮರ್ಥನೆ ಮಾಡಿಕೊಂಡರು.

Join Whatsapp
Exit mobile version