ಕಾಂಗ್ರೆಸ್ ಯೋಜನೆಗಳ ಲಾಭ ಬಡವರು ಪಡೆಯುವುದು ಬಿಜೆಪಿಗೆ ಇಷ್ಟವಿಲ್ಲ: ಅಶೋಕ್ ಗೆಹ್ಲೋಟ್

Prasthutha|

ಜೈಪುರ: ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಲಾಭ ಬಡವರಿಗೆ ತಲುಪುವುದು ಬಿಜೆಪಿಗೆ ಇಷ್ಟವಿಲ್ಲ. ಹಾಗಾಗಿ, ರಾಜ್ಯದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗುರುವಾರ ಆರೋಪಿಸಿದ್ದಾರೆ.

- Advertisement -

ಗೆಹ್ಲೋಟ್ ಅವರ ಮಗ ವೈಭವ್ ಗೆಹ್ಲೋಟ್ ಅವರಿಗೆ ಸಮನ್ಸ್ ಜಾರಿ ಮಾಡಿರುವ ಇ.ಡಿ., ಜೈಪುರ ಅಥವಾ ನವದೆಹಲಿಯಲ್ಲಿರುವ ಕಚೇರಿಯಲ್ಲಿ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
ಈ ವಿಚಾರವಾಗಿ ತಮ್ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಗೆಹ್ಲೋಟ್, ‘ದಿನಾಂಕ 25/10/2023, ರಾಜಸ್ಥಾನ ಮಹಿಳೆಯರಿಗಾಗಿ ಖಾತರಿ ಯೋಜನೆಗಳನ್ನು ಕಾಂಗ್ರೆಸ್ ಘೋಷಿಸಿತು. ದಿನಾಂಕ 26/10/2023, ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೊತಸ್ರಾ ಅವರ ವಿರುದ್ಧ ಇ.ಡಿ ದಾಳಿ ನಡೆಸಲಾಯಿತು. ವಿಚಾರಣೆಗೆ ಹಾಜರಾಗುವಂತೆ ನನ್ನ ಮಗ ವೈಭವ್ ಗೆಹ್ಲೋಟ್ ಗೆ ಸಮನ್ಸ್ ನೀಡಲಾಯಿತು. ರಾಜಸ್ಥಾನದಲ್ಲಿ ಕಾಂಗ್ರೆಸ್ ನೀಡುತ್ತಿರುವ ಖಾತರಿ ಯೋಜನೆಗಳ ಲಾಭವನ್ನು ಮಹಿಳೆಯರು, ರೈತರು ಮತ್ತು ಬಡವರು ಪಡೆಯುವುದು ಬಿಜೆಪಿಗೆ ಇಷ್ಟವಿಲ್ಲ. ಹಾಗಾಗಿ ಇ.ಡಿ ದಾಳಿ ನಡೆಸಲಾಗುತ್ತಿದೆ ಎಂದು ನಾನು ಹೇಳಿದ್ದನ್ನು ಈಗ ನೀವೇ ಅರ್ಥಮಾಡಿಕೊಳ್ಳಬಹುದು’ ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

Join Whatsapp