ನನ್ನ ಜೀವನದಲ್ಲೇ ಲಂಚ ತೆಗೆದುಕೊಂಡಿಲ್ಲ ಅಂತಾ ಡಿಕೆಶಿ ಅಜ್ಜಯ್ಯನ ಮಠದಲ್ಲಿ ಪ್ರಮಾಣ ಮಾಡಲಿ: ಸಿ.ಟಿ ರವಿ

Prasthutha|

ಚಿಕ್ಕಮಗಳೂರು: ನನ್ನ ಜೀವನದಲ್ಲೇ ಒಮ್ಮೆಯೂ ಲಂಚ ತೆಗೆದುಕೊಂಡಿಲ್ಲ ಅಂತಾ ಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.

- Advertisement -

ಚಿಕ್ಕಮಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರು ತಮ್ಮ ಸರ್ಕಾರ ಪ್ರಮಾಣಿಕ ಅನ್ನೋದಾದ್ರೆ ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡಲಿ ಎಂದು ಸಿ.ಟಿ ರವಿ ಟಾಂಗ್ ಕೊಟ್ಟಿದ್ದಾರೆ.

ಅಜ್ಜಯ್ಯನ ಮಠದಲ್ಲಿ ಪ್ರಮಾಣ ಮಾಡಲಿ ಅನ್ನುವುದು ನಮ್ಮ ಆರೋಪವಲ್ಲ. ಬಿಬಿಎಂಪಿ ಗುತ್ತಿಗೆದಾರರ ಸಂಘದ ಆರೋಪ. ಡಿಕೆಶಿಗೆ ಅಜ್ಜಯ್ಯನ ಮಠದ ಬಗ್ಗೆ ಭಕ್ತಿ ಇರುವುದರಿಂದ ಅಲ್ಲಿಗೆ ಕರೆದಿದ್ದಾರೆ. ನಾವು ತಪ್ಪೇ ಮಾಡಿಲ್ಲ ಅನ್ನೋದಾದ್ರೆ ಹೋಗಿ ಪ್ರಮಾಣ ಮಾಡಬಹುದಲ್ವಾ? ಎಂದು ಪ್ರಶ್ನಿಸಿದ್ದಾರೆ.

- Advertisement -

ಗುತ್ತಿಗೆದಾರರ ಬಳಿ ನಾನು ಮಾಹಿತಿ ಪಡೆದುಕೊಂಡಿದ್ದೇನೆ. ಮೊದಲು ಹಳೇಯದ್ದಕ್ಕೆಲ್ಲಾ ಸೇರಿಸಿ 7% ಫಿಕ್ಸ್ ಮಾಡಿದ್ರು, ಮದ್ಯವರ್ತಿಗಳು 10% ಅಂದ್ರು ಆಮೇಲೆ ಚರ್ಚೆ ಮಾಡಿ 15% ಆದ್ರೆ ಮಾತ್ರ ಕ್ಲಿಯರ್ ಅಂತಾ ಹೇಳಿದ್ದಾರೆ. ಆರೋಪ ಗುತ್ತಿಗೆದಾರರ ಸಂಘದ್ದು, ಸುಳ್ಳು ಅನ್ನೊದಾದ್ರೆ ಅಜ್ಜಯ್ಯನ ಮಠಕ್ಕೆ ಹೋಗಿ ಸತ್ಯ ಮಾಡಲಿ. ಸತ್ಯ ಮಾಡುವಾಗ ನನ್ನ ಜೀವನದಲ್ಲೇ ಲಂಚ ತೆಗೆದುಕೊಂಡಿಲ್ಲ ಎಂದು ಹೇಳಿದ್ರೆ ಸಾಕು, ಬೇರೆ ಸಾಕ್ಷಿಯೇ ಬೇಕಾಗಿಲ್ಲ ಎಂದು ಹೇಳಿದ್ದಾರೆ.

Join Whatsapp