ಸೋಲಿನ ನಂತರ ಪಕ್ಷ ಕಟ್ಟುವಲ್ಲಿ ಬಿಜೆಪಿ ವಿಫಲ: ಸದಾನಂದ ಗೌಡ ಅಸಮಾಧಾನ

Prasthutha|

ಬೆಂಗಳೂರು: ಕೆಲವು ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿರುವುದು ನಮ್ಮ ವೈಫಲ್ಯವಾಗಿದೆ. ಸೋಲಿನ ನಂತರ ಪಕ್ಷ ಕಟ್ಟುವಲ್ಲಿ ನಾವು ವಿಫಲವಾಗಿದ್ದೇವೆ.

- Advertisement -

ಅದರಿಂದಾಗಿಯೇ ನಾಯಕರು ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಕಾಂಗ್ರೆಸ್ ಗೆ ಕೆಲವರು ವಲಸೆ ಹೋಗುತ್ತಿದ್ದಾರೆ. ನಮ್ಮವರು ಅನೇಕರು ಬಿಜೆಪಿ ಬಿಟ್ಟು ಹೋಗುತ್ತಿರುವುದು ನಿಜ, ಅವರನ್ನು ಮನವರಿಕೆ ಮಾಡಿ ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನ ನಡೆಯುತ್ತಿಲ್ಲ. ವಿಧಾನಸಭೆ ಚುನಾವಣೆ ಸೋಲಿನ ನಂತರ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಿ ಪಕ್ಷ ಕಟ್ಟಿವಲ್ಲಿ ವಿಫಲವಾಗಿದ್ದೇವೆ” ಎಂದರು.



Join Whatsapp