ಅವಧಿಪೂರ್ವ ಚುನಾವಣೆಗೆ ಬಿಜೆಪಿಯಿಂದ ಭರದ ಸಿದ್ಧತೆ: ಎಚ್‌.ಡಿ. ಕುಮಾರಸ್ವಾಮಿ

Prasthutha|

ಬೆಂಗಳೂರು: ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆಗೆ ಸಿದ್ಧತೆ ಬಿಜೆಪಿ ಮಾಡುತ್ತಿದ್ದು, ಅದಕ್ಕಾಗಿ ತರಾತುರಿಯಲ್ಲಿ ಸಂಪುಟ ಸಭೆ ನಡೆಸಿ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

- Advertisement -


ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಶುಕ್ರವಾರದ ಸಂಪುಟ ಸಭೆಯನ್ನು ಗಮನಿಸಿದರೆ ಬಿಜೆಪಿಯು ಈ ವರ್ಷದ ಡಿಸೆಂಬರ್‌ ವೇಳೆಗೆ ಚುನಾವಣೆ ಎದುರಿಸಲು ಸಜ್ಜಾಗುತ್ತಿರುವಂತೆ ಕಾಣುತ್ತಿದೆ. ಆದರೆ ಯಾವುದೇ ಸಂದರ್ಭದಲ್ಲಿ ಚುನಾವಣೆ ಬಂದರೂ ನಾವು ಸಿದ್ಧರಾಗಿದ್ದೇವೆ ’ ಎಂದು ಹೇಳಿದರು.


‘ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋನಿಯಾ ಗಾಂಧಿಯವರನ್ನು ವಿಚಾರಣೆ ನಡೆಸುವುದನ್ನು ವಿರೋಧಿಸಿ ಕಾಂಗ್ರೆಸ್‌ನವರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆಪ್ರತಿಭಟನೆಗಳಿಂದ ಅನುಕಂಪ ಗಿಟ್ಟಿಸಲು ಸಾಧ್ಯವಿಲ್ಲ’ ಎಂದು ಹೇಳಿದರು.

Join Whatsapp