ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಬಿಜೆಪಿ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ: ಸಿದ್ದರಾಮಯ್ಯ ಆಕ್ರೋಶ

Prasthutha|

ಬೆಂಗಳೂರು: ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಬಿಜೆಪಿ ಸರ್ಕಾರದ ಭಷ್ಟ ಕಣ್ಣು ಬಿದ್ದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ರಾಜ್ಯ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಅವರು, ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಬಿಜೆಪಿ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ. ಕಮಿಷನ್ ಹೆಸರಲ್ಲಿ ರಾಜ್ಯದ ಖಜಾನೆ ಲೂಟಿ ಆಯಿತು. ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ..! ಬಿಜೆಪಿ ಸರ್ಕಾರಕ್ಕೆ ಇಂಥಾ ದೈನೇಸಿ ಸ್ಥಿತಿ ಬರಬಾರದಿತ್ತು ಎಂದು ಅವರು ಕಿಡಿ ಕಾರಿದ್ದಾರೆ.

ವಿದ್ಯಾರ್ಥಿಗಳಿಗೆ ಹಾಲು, ಬಿಸಿ ಊಟ, ಸಮವಸ್ತ್ರ, ಶೂ, ವಿದ್ಯಾಸಿರಿ, ಹಾಸ್ಟೆಲ್ ಸೌಲಭ್ಯಗಳನ್ನು ನೀಡಿದ್ದು ನಾವು. ವಿದ್ಯಾರ್ಥಿಗಳಿಂದ ಒಂದೊಂದನ್ನೇ ಕಿತ್ತುಕೊಳ್ಳುತ್ತಿರುವ ಬಿಜೆಪಿ ಸರ್ಕಾರ ದೀಗ ವಿದ್ಯಾರ್ಥಿಗಳಿಂದ ದುಡ್ಡು ಕಿತ್ತುಕೊಳ್ಳಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ವೇದಿಕೆ ಮೇಲೆ ಧಮ್, ತಾಕತ್ ಎಂದು ಬೊಬ್ಬಿರಿಯುವವರು ವಿದ್ಯಾರ್ಥಿಗಳ ನೆರವಿನ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿ ತಮ್ಮ ತಾಕತ್ ತೋರಿಸಲಿ ಎಂದು ಮುಖ್ಯಮಂತ್ರಿಗೆ ಸವಾಲೆಸೆದರು.

ನಮ್ಮ ಸರ್ಕಾರ ವಿದ್ಯಾಸಿರಿ, ಅರಿವು, ಶೂ ಭಾಗ್ಯ, ವಿದೇಶಿ ವ್ಯಾಸಂಗಕ್ಕೆ ಆರ್ಥಿಕ ನೆರವು, ಶೈಕ್ಷಣಿಕ ಸಾಲ ಯೋಜನೆ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕು ನೀಡಿದರೆ, ಈಗಿನ ಬಿಜೆಪಿ ಸರ್ಕಾರ ಓದುವ ಮಕ್ಕಳಿಗೆ ತ್ರಿಶೂಲ ದೀಕ್ಷೆ ನೀಡಿ ಅವರ ಬದಕನ್ನು ಕತ್ತಲಿಗೆ ದೂಡುತ್ತಿದೆ ಎಂದು ಆರೋಪಿಸಿದರು.

ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಪೋಷಕರಿಂದ ಹಣ ಸಂಗ್ರಹಿಸುವಂತೆ ಹೊರಡಿಸಿರುವ ಆದೇಶವನ್ನು ಈ ಕೂಡಲೇ ಹಿಂಪಡೆಯಬೇಕು ಮತ್ತು ಅನುದಾನ ಕೊರತೆಯಿಂದ ಸ್ಥಗಿತಗೊಂಡಿರುವ ಎಲ್ಲಾ ಶೈಕ್ಷಣಿಕ ಯೋಜನೆಗಳಿಗೆ ಪುನರ್ ಚಾಲನೆ ನೀಡಬೇಕು ಎಂದು ರಾಜ್ಯ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದರು.

Join Whatsapp