‘ಬಿಜೆಪಿ ಸರ್ಕಾರ ಗೌರವಾನ್ವಿತ ಸದನವನ್ನು ಮದುವೆ ಛತ್ರದಂತೆ ಭಾವಿಸಿದೆ’: ಕಾಂಗ್ರೆಸ್

Prasthutha|

ಬೆಂಗಳೂರು: ಲೋಕಸಭೆಯ ಸಭಾಧ್ಯಕ್ಷ ಓಂ ಬಿರ್ಲಾ ಅವರು ರಾಜ್ಯದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರ ಗೌರವಾನ್ವಿತ ಸದನವನ್ನು ಮದುವೆ ಛತ್ರದಂತೆ ಭಾವಿಸಿದೆ ಎಂದು ಹೇಳಿದೆ.

- Advertisement -

    ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಸದನದ ಸದಸ್ಯರಲ್ಲದವರಿಗೆ ಪ್ರವೇಶವಿಲ್ಲದಿರುವಾಗ ಓಂ ಬಿರ್ಲಾರನ್ನು ಯಾವ ನಿಯಮಗಳ ಅಡಿಯಲ್ಲಿ ಕರೆಸಲಾಯಿತು? ಅವರ ಭದ್ರತಾ ಸಿಬ್ಬಂದಿಗೆ ಸದನದೊಳಗೆ ಪ್ರವೇಶಿಸಲು ಅನುಮತಿ ನೀಡಿದವರಾರು? ಚರ್ಚೆ ನಡೆಸಬೇಕಾದಲ್ಲಿ ಸಮಾರಂಭ ನಡೆಸಿದ್ದೇಕೆ? ನಿರೂಪಕರನ್ನು ಸದನದೊಳಗೆ ಕರೆತಂದಿದ್ದೇಕೆ? ಮುಂದೆ ದಾರಿಹೋಕರನ್ನೂ ಸದನಕ್ಕೆ ಕರೆಸುವಿರಾ ಕಾಗೇರಿಯವರೆ ಎಂದು ವಾಗ್ದಾಳಿ ನಡೆಸಿದೆ.

ಬಿಜೆಪಿಯು ಗೌರವಾನ್ವಿತ ಸದನವನ್ನು ಮದುವೆ ಛತ್ರದಂತೆ ಭಾವಿಸಿದೆ! ನಿಯಮಗಳನ್ನ ಸದನ ಸದಸ್ಯರಲ್ಲದವರನ್ನ ಕರೆಸಿ ಭಾಷಣ ಮಾಡಿಸಿ ಯಾವ ಘನ ಕಾರ್ಯ ಸಾಧಿಸಿದೆ ಬಿಜೆಪಿ? ಹೀಗೆಯೇ ಬಿಟ್ಟರೆ ಸದನದಲ್ಲಿ ಮದುವೆ, ಮುಂಜಿಯಂತಹ ಸಮಾರಂಭಗಳನ್ನ ಮಾಡಲೂ ಬಿಜೆಪಿ ಹಿಂಜರಿಯುವುದಿಲ್ಲ! ಪ್ರಜಾಪ್ರಭುತ್ವದ ಘನತೆ ಅರಿಯದವರಿಂದ ಇನ್ನೇನು ನಿರೀಕ್ಷಿಸಲಾದೀತು ಎಂದು ಕಾಂಗ್ರೆಸ್ ಆಕ್ಷೇಪಿಸಿದೆ.

Join Whatsapp