ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ: ರಾಜೀನಾಮೆ ನೀಡಲು ಮುಂದಾದ ಪದಾಧಿಕಾರಿಗಳು

Prasthutha|

ಹಾನಗಲ್‌: ಉಪಚುನಾವಣೆಗೆ ಶಿವರಾಜ ಸಜ್ಜನರ ಹೆಸರು ಘೋಷಣೆಯಾಗುತ್ತಿದ್ದಂತೆ ತಾಲೂಕಿನಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಸಂಸದ ಶಿವಕುಮಾರ್‌ ಉದಾಸಿ ಪತ್ನಿ ರೇವತಿ ಅವರಿಗೆ ಟಿಕೆಟ್‌ ನೀಡುವಂತೆ ಒತ್ತಾಯಿಸಿ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಇಲ್ಲಿನ ಬಿಜೆಪಿ ಕಾರ್ಯಾಲಯ ಬಂದ್‌ ಮಾಡಿದ ಕಾರ್ಯಕರ್ತರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು. ನಂತರ ರಸ್ತೆಯಲ್ಲಿ ಟೈರ್‌ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಬಿಜೆಪಿ ಎಲ್ಲ ಪದಾಧಿ ಕಾರಿಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವ ಘೋಷಣೆ ಮಾಡಿದರು.

ಶಿವರಾಜ್‌ಗೆ ಟಿಕೆಟ್‌ ನೀಡುವುದಾದರೆ ನಾವು ಕೆಲಸ ಮಾಡುವುದಿಲ್ಲ. ಸ್ಥಳೀಯರಿಗೆ ನ್ಯಾಯ ಒದಗಿಸಿ ಕೊಡಿ ಎಂದು ವರಿಷ್ಠರಿಗೆ ಮನವಿ ಮಾಡಿದರು.

Join Whatsapp