ಇಂಧನ ಬೆಲೆ 50 ರೂ. ಇಳಿಸಲು ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸಬೇಕು: ಸಂಜಯ್ ರಾವತ್

Prasthutha|

ಪಣಜಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 50 ರೂಪಾಯಿಗೆ ಇಳಿಸುವವರೆಗೂ ದೇಶದಲ್ಲಿ ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸಬೇಕಾಗಿದೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ.

- Advertisement -

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಪ್ರತಿ ಲೀಟರ್ ಗೆ ಕ್ರಮವಾಗಿ 5 ಮತ್ತು 10 ರೂ. ಗಳಷ್ಟು ಕಡಿತಗೊಳಿಸಿದ ಒಂದು ದಿನದ ನಂತರ ಸಂಸದ ರಾವತ್ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.

ಕೇಂದ್ರದ ವಿರುದ್ಧ ತೀವ್ರ ರೀತಿಯಲ್ಲಿ ವಾಗ್ದಾಳಿ ನಡೆಸಿದ ರಾವತ್, ಮಹಾರಾಷ್ಟ್ರದಲ್ಲಿ ಎನ್.ಸಿ.ಪಿ, ಕಾಂಗ್ರೆಸ್ ನೊಂದಿಗೆ ಅಧಿಕಾರ ಹಂಚಿಕೊಂಡಿರುವ ಶಿವಸೇನಾ ಇಂಧನ ಬೆಲೆಯನ್ನು ಕಡಿಮೆ ಮಾಡುವ ಬಗ್ಗೆ ಚಿಂತನೆ ನಡೆಸಬೇಕು ಎಂದು ಸುದ್ದಿಗಾರರಿಗೆ ತಿಳಿಸಿದರು.

- Advertisement -

ದೇಶದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅನುಭವಿಸಿದ ಹೀನಾಯ ಸೋಲಿನಿಂದಾಗಿ ಬಿಜೆಪಿ ಪೆಟ್ರೋಲ್, ಡೀಸೆಲ್ ಗೆ ಪ್ರತಿ ಲೀಟರ್ ಗೆ ಕ್ರಮವಾಗಿ 5 ಮತ್ತು 10 ರೂ. ಕಡಿತಗೊಳಿಸಿದೆ ಎಂದರು.

5 ರೂ. ಇಳಿಕೆಯಿಂದ ದೇಶಕ್ಕೆ ಏನು ಪ್ರಯೋಜನವಿಲ್ಲ. ಕಾರಣ ಇಂಧನದ ಬೆಲೆಯನ್ನು ಏರಿಸಿ ಮತ್ತೆ ಈಗ ಕಡಿತಗೊಳಿಸಿದೆ. ಈ ನಿಟ್ಟಿನಲ್ಲಿ ಪೆಟ್ರೋಲ್ ಬೆಲೆಯನ್ನು 50 ರೂ. ಗೆ ಇಳಿಸಲಿ ಎಂದು ಆಗ್ರಹಿಸಿದರು. ಮಾತ್ರವಲ್ಲ 50 ರೂ. ಪೆಟ್ರೋಲ್ ಸಿಗುವಂತಾಗಲೂ ದೇಶದ ಜನತೆ ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸುವಂತಾಗಲಿ ಎಂದು ಮಾರ್ಮಿಕವಾಗಿ ನುಡಿದರು.

Join Whatsapp