Home ಟಾಪ್ ಸುದ್ದಿಗಳು ಬಿಜೆಪಿಯವರಿಗೆ ಕೆಲಸ ಇಲ್ಲ, ಸುಮ್ಮನೆ ಆರೋಪ ಮಾಡ್ತಾರೆ: ಪರಮೇಶ್ವರ್

ಬಿಜೆಪಿಯವರಿಗೆ ಕೆಲಸ ಇಲ್ಲ, ಸುಮ್ಮನೆ ಆರೋಪ ಮಾಡ್ತಾರೆ: ಪರಮೇಶ್ವರ್

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರನ್ನು ಅಧಿಕಾರದಿಂದ ಕೆಳಗಿಳಿಸೋಕೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಪ್ಲಾನ್ ಮಾಡಿದ್ದಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ದುರುದ್ದೇಶ ಪೂರ್ವಕವಾದದ್ದು. ಬಿಜೆಪಿಯವರಿಗೆ ಕೆಲಸ ಇಲ್ಲ, ಸುಮ್ಮನೆ ಆರೋಪ ಮಾಡುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮನೆಗೆ ಬರುವುದು, ನಾನು ಅವರ ಮನೆಗೆ ಹೋಗುವುದು ಸ್ವಾಭಾವಿಕ ಪ್ರಕ್ರಿಯೆ. ಅವರು ಹೇಳುವ ರೀತಿ ಯಾವುದೇ ಚರ್ಚೆ ಆಗಿಲ್ಲ. ನಾವು ಡಿ.ಕೆ ಶಿವಕುಮಾರ್ ಅವರ ಕೇಸ್ ವಿಥ್ ಡ್ರಾ ಮಾಡಿರುವುದಕ್ಕೆ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಡಿಕೆಶಿ ಅವರ ಕೇಸ್‍ನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಲೋಕಾಯುಕ್ತಕ್ಕೆ ಕೊಟ್ಟು ತನಿಖೆ ಮಾಡಿಸಬಹುದಿತ್ತು. ಆಗ ಮಾಡದೇ ಈಗ ನಮ್ಮ ಮೇಲೆ ಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

Join Whatsapp
Exit mobile version