ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಕ್ಕೆ ಬಿಜೆಪಿ ಪ್ರಚೋದನೆ: ಮಮತಾ ಬ್ಯಾನರ್ಜಿ

Prasthutha|

ಹರಿಹರಪಾರ: ರಾಮನವಮಿ ಆಚರಣೆಯ ಸಂದರ್ಭದಲ್ಲಿ ಬಿಜೆಪಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

- Advertisement -


ಹರಿಹರಪಾರದಲ್ಲಿ ಮಾತನಾಡಿದ ಅವರು, ‘2024ರ ಲೋಕಸಭೆ ಚುನಾವಣೆಯು ಎರಡನೇ ಸ್ವಾತಂತ್ರ್ಯ ಸಂಗ್ರಾಮಕ್ಕಿಂತ ಕಡಿಮೆಯೇನಲ್ಲ. ಏಕೆಂದರೆ ಬಿಜೆಪಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಮರಳಿದರೆ ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಅಸ್ತಿತ್ವಕ್ಕೆ ಅಪಾಯವನ್ನುಂಟು ಮಾಡಲಿದೆ’ ಎಂದು ಹೇಳಿದರು.


ಮುರ್ಷಿದಾಬಾದ್ ಜಿಲ್ಲೆಯಲ್ಲಿ ರಾಮನವಮಿ ಆಚರಣೆಯ ವೇಳೆ ನಡೆದ ಹಿಂಸಾಚಾರವು ಬಿಜೆಪಿಯ ಪೂರ್ವ ಯೋಜಿತ ಕೃತ್ಯ ಎಂದು ಅವರು ದೂರಿದರು.

Join Whatsapp