ಬಿಜೆಪಿಗೆ ಸುಳ್ಳೇ ಬಂಡವಾಳ: ಶಾಸಕ ಪ್ರಿಯಾಂಕ್ ಖರ್ಗೆ

Prasthutha|

ಬೆಂಗಳೂರು: ‘ಚಿಂತನೆಗಳಿಲ್ಲದ ಬಿಜೆಪಿಯವರಿಗೆ ವಾಟ್ಸ್ ಆ್ಯಪ್ ಯೂನಿವರ್ಸಿಟಿಯ ಸುಳ್ಳುಗಳೇ ಮೂಲ’ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

- Advertisement -

ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯನ್ನಾಗಿ ದ್ರೌಪದಿ ಮುರ್ಮುಗೆ ಅವರ ಆಯ್ಕೆ ಕುರಿತು ಟ್ವೀಟ್ ಮಾಡಿರುವ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ,  ‘ಮುಸ್ಲಿಂ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದು ನಾವೇ. ದಲಿತ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದೂ ನಾವೇ. ಇಂದು ಆದಿವಾಸಿ ಬುಡಕಟ್ಟು ಜನಾಂಗದ ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿ ಮಾಡುವುದು ನಾವೇ. ಏಕೆಂದರೆ ನಾವು ಜಾತಿವಾದಿಗಳಲ್ಲ – ರಾಷ್ಟ್ರವಾದಿಗಳು ಎಂದು ಹೇಳಿದ್ದರು.

ಈ ಟ್ವೀಟ್ ಗೆ ಪ್ರತಿಕ್ರಿಯಿಸಿ ಖಡಕ್ ತಿರುಗೇಟು ನೀಡಿರುವ ಶಾಸಕ ಪ್ರಿಯಾಂಕ್ ಖರ್ಗೆ,  ‘ಚಿಂತನೆಗಳಿಲ್ಲದ ಬಿಜೆಪಿಯವರಿಗೆ ವಾಟ್ಸ್ ಆ್ಯಪ್ ಯೂನಿವರ್ಸಿಟಿಯ ಸುಳ್ಳುಗಳೇ ಮೂಲ. ಅಂದಹಾಗೆ, ಎಸ್ಇ/ ಎಸ್ಟಿ ಜನಾಂಗದ 7000 ಕೋಟಿ, ದಲಿತರ ಪಾಲಿನ ಬೋರ್ ವೆಲ್ ಹೆಸರಲ್ಲಿ 431 ಕೋಟಿ, ಭೋವಿ ನಿಗಮದಲ್ಲಿ 150 ಕೋಟಿ ಲೂಟಿ ಮಾಡುವುದು ನಿಮ್ಮ ರಾಷ್ಟ್ರವಾದವೇ’ ಎಂದು ಪ್ರಶ್ನಿಸಿದ್ದಾರೆ.

Join Whatsapp