ಬಿಜೆಪಿ ಕೇವಲ ತುಟಿಗೆ ತುಪ್ಪ ಹಚ್ಚೋ ಕೆಲಸ ಮಾಡ್ತಿದೆ: ಈಶ್ವರ ಖಂಡ್ರೆ ಟೀಕೆ

Prasthutha|

ಬೆಂಗಳೂರು: ಪ್ರಾದೇಶಿಕ ಅಸಮತೋಲನ ಖಂಡಿಸಿ ಕಲ್ಯಾಣ ಕರ್ನಾಟಕ ಯಾತ್ರೆ ನಡೆಸಲಾಗುವುದು ಎಂದು ಕಲಬುರಗಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭಾನುವಾರ ಹೇಳಿದ್ದಾರೆ.

- Advertisement -

ಬಿಜೆಪಿಯವರು ಕೋಮ ಸೌಹರ್ದಾತೆಯನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ 2 ಬಾರಿ ಸಭೆ ಕರೆದು ಚರ್ಚೆ ಮಾಡಿದ್ದೇವೆ. ರೂಪರೇಷೆಗಳು ಸಿದ್ಧಗೊಳ್ಳುತ್ತಿದ್ದುಬರುವ ಎಪ್ರಿಲ್ನಲ್ಲಿ ಯಾತ್ರೆ ನಡೆಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಿದರು.

 ಬಿಜೆಪಿಯವರು ಕೇವಲ ತುಟಿಗೆ ತುಪ್ಪ ಹಚ್ಚೋ ಕೆಲಸ ಮಾಡ್ತಿದ್ದಾರೆ. ಬಿಜೆಪಿ ಸರ್ಕಾರದಿಂದ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ ಆಗಿದೆ. ಬಜೆಟ್ ನಲ್ಲಿ ಮೂರು ಸಾವಿರ ಕೋಟಿ ನೀಡಿದ್ದಾರೆ. ಆದರೆ ಈ ಹಿಂದೆ ನೀಡಿದ್ದ ಹಣವನ್ನು ಇನ್ನೂ ಖರ್ಚು ಮಾಡಿಲ್ಲ. ಹಣ ನೀಡಿರುವುದು ಟ್ರಜರಿಯಲ್ಲಿಟ್ಟು ಪೂಜೆ ಮಾಡಲಿಕ್ಕಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

Join Whatsapp
Exit mobile version