Home ಟಾಪ್ ಸುದ್ದಿಗಳು ಜೂ. 28ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮುತ್ತಿಗೆ: ಬಿ.ವೈ.ವಿಜಯೇಂದ್ರ

ಜೂ. 28ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮುತ್ತಿಗೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಸಂಬಂಧ ಹಣಕಾಸು ಸಚಿವರಾದ ಮುಖ್ಯಮಂತ್ರಿಯವರು ಜವಾಬ್ದಾರಿ ಹೊರಬೇಕು. ಈ ಸಂಬಂಧ ಶರಣಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು.

ದೆಹಲಿಯಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ 28ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ. ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ಪೋಲಾಗಿದೆ; ಅದರ ದುರ್ಬಳಕೆ ಆಗಿದೆ. ಕಾಂಗ್ರೆಸ್ ಸರಕಾರವು ಈ ಹಣವನ್ನು ದೋಚಿದೆ ಎಂದು ಟೀಕಿಸಿದರು.

ಕರ್ನಾಟಕ ರಾಜ್ಯ ಸರಕಾರವು ಜನರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಆಕ್ಷೇಪಿಸಿದ ಅವರು, ನಿಗಮದ ಹಗರಣ ಸಂಬಂಧ ಯೂನಿಯನ್ ಬ್ಯಾಂಕ್ ಆಫ್ ಇಂಡಿಯ ಪತ್ರದನ್ವಯ ಸಿಬಿಐ ತನಿಖೆ ನಡೆಯುತ್ತಿದೆ. ರಾಜ್ಯ ಸರಕಾರ ಆತುರಾತುರವಾಗಿ ಎಸ್‍ಐಟಿಯನ್ನೂ ರಚಿಸಿ ತಮಗೆ ಬೇಕಾದಂತೆ ತನಿಖೆ ನಡೆಸುತ್ತಿದೆ ಎಂದು ಟೀಕಿಸಿದರು.

Join Whatsapp
Exit mobile version