ಆಪರೇಷನ್ ಕಮಲ ಆರಂಭಿಸಿದ ಬಿಜೆಪಿ: ಕಾಂಗ್ರೆಸ್ ಶಾಸಕರಿಗೆ 50 ಕೋಟಿ & ಸಚಿವ ಸ್ಥಾನದ ಆಮಿಷ

Prasthutha|

- Advertisement -

ದಾವಣಗೆರೆ: ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಲಾಗುತ್ತಿದೆ ಎಂಬ ಆರೋಪಗಳ ನಡುವೆ ಬಿಜೆಪಿ ಆಪರೇಷನ್ ಕಮಲ ಆರಂಭಿಸಿದ ಸೂಚನೆ ಸಿಕ್ಕಿದೆ. ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. & ಸಚಿವ ಸ್ಥಾನದ ಆಮಿಷವೊಡ್ಡಿದ್ದು ಬಹಿರಂಗವಾಗಿದೆ.

ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ನಮ್ಮ ಶಾಸಕರಿಗೆ 50 ಕೋಟಿ ರೂಪಾಯಿ ಹಾಗೂ ಸಚಿವ ಸ್ಥಾನದ ಆಮಿಷವೊಡ್ಡಲಾಗುತ್ತಿದೆ ಎಂದು ಗಣಿಗ ರವಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಅವರು ಅದಾಗಲೇ ಕಾಂಗ್ರೆಸ್ ನ 4 ಶಾಸಕರನ್ನು ಭೇಟಿ ಮಾಡಿ ಬೃಹತ್ ಆಮಿಷವೊಡ್ಡಿ ಚರ್ಚೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

- Advertisement -

ಯಡಿಯೂರಪ್ಪ ಅವರ ಮಾಜಿ ಆಪ್ತ ಕಾರ್ಯದರ್ಶಿ ಎನ್ ಆರ್ ಸಂತೋಷ್ ನಮ್ಮ ಶಾಸಕರನ್ನು ಸಂಪರ್ಕಿಸಿ ಈ ಆಮಿಷವೊಡ್ಡುತ್ತಿದ್ದಾರೆ ಎಂದು ತಿಳಿಸಿದ ರವಿ, ಕಾಂಗ್ರೆಸ್-ಜೆಡಿಎಸ್ ಸರ್ಕಾರದಲ್ಲಿ ಅಸಮಾಧಾಗೊಂಡಿದ್ದ ಶಾಸಕರನ್ನು ಸಂಪರ್ಕಿಸಿ ಸರ್ಕಾರ ಅಸ್ಥಿರಗೊಳಿಸುವಲ್ಲಿಯೂ ಸಂತೋಷ್ ಪ್ರಮುಖ ಪಾತ್ರ ವಹಿಸಿದ್ದರು ಎಂದಿದ್ದಾರೆ.

ಕಳೆದ ಸಲ ಬಿಜೆಪಿ ಅತಿ ಹೆಚ್ಚು ಶಾಸಕರನ್ನು ಹೊಂದಿದ್ದ ಏಕೈಕ ಪಕ್ಷವಾದ ಬಿಜೆಪಿ ಈಗ 66 ಶಾಸಕರನ್ನು ಮಾತ್ರ ಹೊಂದಿದೆ. ಕಾಂಗ್ರೆಸ್ ಪಕ್ಷ 136 ಸ್ಥಾನಗಳನ್ನು ಗಳಿಸಿದ. ಸಂತೋಷ್ ಜೆಡಿಎಸ್ ನಿಂದ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದಾರೆ. ಆದರೂ ಇನ್ನೂ ಪಾಠ ಕಲಿತಿಲ್ಲ ಎಂದು ರವಿ ಹೇಳಿದ್ದಾರೆ.

ಆತ ಶಾಸಕರನ್ನು ಖರೀದಿಸಿ ಸರ್ಕಾರ ಬೀಳಿಸುವ ಮಾತನ್ನಾಡುತ್ತಿದ್ದಾರೆ. ಅಂತೆಯೇ ಅದಕ್ಕೆ ತಕ್ಕಂತೆ ಪ್ರಯತ್ನಗಳೂ ನಡೆಯುತ್ತಿವೆ. ಈ ಕುರಿತ ವೀಡಿಯೋಗಳೂ ನಮ್ಮ ಬಳಿ ಇವೆ. ಈ ಕುರಿತ ಬೆಳವಣಿಗೆಗಳನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಗಮನಕ್ಕೆ ತಂದಿದ್ದೇವೆ. ಸೂಕ್ತ ಸಮಯದಲ್ಲಿ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಶಾಸಕ ರವಿ ಹೇಳಿದ್ದಾರೆ.

ಆಮಿಷವೊಡ್ಡುವ ಈ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ಈ ಸಂಬಂಧ ಇರುವ ವೀಡಿಯೋ ಹಾಗೂ ದಾಖಲೆಗಳನ್ನು ಶೀಘ್ರವೇ ಬಿಡುಗಡೆ ಮಾಡುತ್ತೇವೆ ಎಂದು ಶಾಸಕರು ಹೇಳಿದ್ದಾರೆ. 50 ಕೋಟಿ ರೂಪಾಯಿ ಹಾಗೂ ಸಚಿವ ಸ್ಥಾನದ ಆಮಿಷವೊಡ್ಡಲಾಗುತ್ತಿದೆ. ಶಾಸಕರನ್ನು ದೆಹಲಿಗೆ ಕಳಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಭೆ ಏರ್ಪಡಿಸುವುದಾಗಿ ಹೇಳಲಾಗುತ್ತಿದೆ ಎಂದು ಶಾಸಕರು ಹೇಳಿದ್ದಾರೆ.



Join Whatsapp