ಬಿಜೆಪಿ ನಾಯಕ ಬಿ.ಎಲ್.ಸಂತೋಷ್ ಗೆ ಸಮನ್ಸ್

Prasthutha|

ಹೈದರಾಬಾದ್ : ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) ಪಕ್ಷದ ಶಾಸಕರಿಗೆ ಬಿಜೆಪಿಗೆ ಸೇರುವಂತೆ ಹಣದ ಆಮಿಷವೊಡ್ಡಿದ ಪ್ರಕರಣಕ್ಕೆ  ಸಂಬಂಧಿಸಿದಂತೆ  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ರಿಗೆ ತೆಲಂಗಾಣ ವಿಶೇಷ ತನಿಖಾ ತಂಡ (ಎಸ್ಐಟಿ) ಸಮನ್ಸ್ ಜಾರಿಗೊಳಿಸಿದೆ.

- Advertisement -

ಶಾಸಕರಿಗೆ ಹಣದ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 41 ಎ ಅಡಿಯಲ್ಲಿ ನ. 21ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬಿ.ಎಲ್.ಸಂತೋಷ್ಗೆ ಸಮನ್ಸ್ ಜಾರಿಗೊಳಿಸಿದ್ದು, ತಪ್ಪಿದರೆ ಬಂಧಿಸುವ ಎಚ್ಚರಿಕೆಯನ್ನೂ ನೀಡಿದೆ.

ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) ಶಾಸಕರಿಗೆ ಫಾರ್ಮ್ ಹೌಸ್ ನಲ್ಲಿ “100 ಕೋಟಿ ರೂ.ಗಳ ಆಮಿಷವೊಡ್ಡಿದ” ಆರೋಪದ ಮೇಲೆ ಕಳೆದ ತಿಂಗಳು ಮೂವರನ್ನು ಬಂಧಿಸಲಾಗಿತ್ತು. ಇದೇ ಪ್ರಕರಣ ಸಂಬಂಧ ಈಗ ಸಮನ್ಸ್ ಜಾರಿ ಮಾಡಲಾಗಿದೆ.

Join Whatsapp