ಬಿಜೆಪಿ ಲೀಡರ್ ಲೆಸ್ ಪಾರ್ಟಿ:​ ​ಜಗದೀಶ್ ಶೆಟ್ಟರ್ ವಾಗ್ದಾಳಿ

Prasthutha|

- Advertisement -

ಗದಗ: ಬಿಜೆಪಿಯಲ್ಲಿ ನಾಯಕತ್ವ ಕೊರತೆ ಇದೆ, ಅದು ಲೀಡರ್ ಲೆಸ್ ಪಾರ್ಟಿ ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್​ ವಾಗ್ದಾಳಿ ನಡೆದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮದುರ್ಗದಲ್ಲಿ ಹಣ ಇದ್ದ ವ್ಯಕ್ತಿಗೆ ಬಿಜೆಪಿ ಟಿಕೆಟ್​​ ಕೊಟ್ಟರು. ಬೈಂದೂರು ಸುಕುಮಾರ್ ಶೆಟ್ಟಿಗೆ ಟಿಕೆಟ್ ತಪ್ಪಿಸಿದರು. ಬಿಜೆಪಿಯ ಮಾಜಿ‌ ಶಾಸಕರು, ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಕಾಂಗ್ರೆಸ್ ಪಕ್ಷ ಸೇರಲು ಬಹಳಷ್ಟು ಜನ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಯಾರು ಸೇರುತ್ತಾರೆಂದು ಹೇಳಲ್ಲ, ನಿರ್ಧಾರವಾದಾಗ ಹೆಸರು ಹೇಳುತ್ತೇನೆ. ಮಾಜಿ ಸಚಿವ ಬಿ.ಸಿ.ಪಾಟೀಲ್​ ಸಂಪರ್ಕದಲ್ಲಿಲ್ಲ ಎಂದು ಹೇಳಿದ್ದಾರೆ.

Join Whatsapp