Home ಟಾಪ್ ಸುದ್ದಿಗಳು ಅಪಘಾತವನ್ನು ಹಲ್ಲೆಯೆಂದು ಬಿಂಬಿಸಿದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ

ಅಪಘಾತವನ್ನು ಹಲ್ಲೆಯೆಂದು ಬಿಂಬಿಸಿದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ

ಕಲಬುರಗಿ: ಕಾರು ಅಪಘಾತವನ್ನು ಮರೆಮಾಚಿ, ಅದನ್ನು ರಾಜಕೀಯವಾಗಿ ಲಾಭಪಡೆಯಲು ಯತ್ನಿಸಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನುಪೊಲೀಸರು ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ.

ಕಲಬುರಗಿ ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್ ನಲ್ಲಿದ್ದ ಮಣಿಕಂಠ್ ರಾಠೋಡ್ ನನ್ನು ಇಂದು(ಡಿಸೆಂಬರ್ 07) ಚೌಕ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತವನ್ನು ಕೊಲೆ ಯತ್ನ ಎಂದು ಬಿಂಬಿಸಿದ್ದ ಮಣಿಕಂಠ ರಾಠೋಡನ ಅಸಲಿಯತ್ತು ಪೊಲೀಸ್ ತನಿಖೆಯಲ್ಲಿ ಬಟಾಬಯಲಾಗಿತ್ತು. ಇದರ ಬೆನ್ನಲ್ಲೇ ಇಂದು ಮಣಿಕಂಠ ರಾಠೋಡ್ ಸುದ್ದಿಗೋಷ್ಠಿ ಕರೆದಿದ್ದರು. ಆದ್ರೆ, ಪೊಲೀಸರು ಸುದ್ದಿಗೋಷ್ಠಿ ನಡೆಸುವ ಮುನ್ನವೇ ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ.

Join Whatsapp
Exit mobile version