ಬೆಳ್ತಂಗಡಿ | ಕಸಾಯಿಖಾನೆಗೆ ದನ ಸಾಗಿಸುತ್ತಿದ್ದ ಬಿಜೆಪಿ ನಾಯಕ ಸೇರಿ ಇಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸಂಘಪರಿವಾರ

Prasthutha|

ಬೆಳ್ತಂಗಡಿ: ಪಿಕಪ್ ವಾಹನವೊಂದರಲ್ಲಿ ಕಸಾಯಿಖಾನೆಗೆ ದನ ಸಾಗಿಸುತ್ತಿದ್ದ ಬಿಜೆಪಿ ನಾಯಕ ಸೇರಿ ಇಬ್ಬರನ್ನು ಸಂಘಪರಿವಾರದ ಕಾರ್ಯಕರ್ತರು  ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳ್ತಂಗಡಿಯ ತಾಲೂಕಿನ ಪಡಂಗಡಿ ಎಂಬಲ್ಲಿ ನಡೆದಿದೆ.

- Advertisement -

ಶೇಖರ ಮತ್ತು ನೆವಿಲ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ತಾಲೂಕಿನ ಪಡಂಗಡಿ ಎಂಬಲ್ಲಿ ಪಿಕಪ್ ವಾಹನವೊಂದರಲ್ಲಿ  ದನ ಸಾಗಿಸುತ್ತಿದ್ದ ಮಾಹಿತಿ ತಿಳಿದ ಸಂಘಪರಿವಾರದವರು ವಾಹನವನ್ನು ತಡೆದು ಅದರಲ್ಲಿದ್ದ ಇಬ್ಬರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

- Advertisement -

 ಆರೋಪಿ ಶೇಖರ ಬಿಜೆಪಿ ಕಾರ್ಯಕರ್ತನಾಗಿದ್ದು, ಪಕ್ಷದ ಜವಾಬ್ದಾರಿಯನ್ನು ಹೊಂದಿದ್ದಾನೆ ಎಂದು ತಿಳಿದು ಬಂದಿದೆ.

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News

Join Whatsapp