Home ಟಾಪ್ ಸುದ್ದಿಗಳು ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ: ವಿಧಾನಸೌಧಕ್ಕೆ ಬೀಗ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ವಶಕ್ಕೆ

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ: ವಿಧಾನಸೌಧಕ್ಕೆ ಬೀಗ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ವಶಕ್ಕೆ

ಬೆಂಗಳೂರು: ಮುಡಾ ಪ್ರಕರಣ ಸಂಬಂಧ ಹೈಕೋರ್ಟ್ ತೀರ್ಪು ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಕೂಗು ಜೋರಾಗಿದೆ.

ಸಿಎಂ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರು ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಪ್ಲೆಕಾರ್ಡ್‌ ಗಳನ್ನು ಪ್ರದರ್ಶಿಸಿ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಘೋಷಣೆ ಕೂಗಿದರು. ಈ ವೇಳೆ ವಿಧಾನಸೌಧಕ್ಕೆ ಬೀಗ ಹಾಕಲು ಮುಂದಾದರು. ಆದರೆ ವಿಪಕ್ಷಗಳ ನಾಯಕರ ಯತ್ನವನ್ನು ಪೊಲೀಸರು ವಿಫಲಗೊಳಿಸಿದರು. ಈ ವೇಳೆ ಪ್ರತಿಭಟನಾ ಸ್ಥಳದಲ್ಲಿ ಹೈಡ್ರಾಮಾ ಸೃಷ್ಟಿಸಿದರು.

Join Whatsapp
Exit mobile version