ನಾರಾಯಣ ಗುರು ಪಠ್ಯ ಮರುಸೇರ್ಪಡೆ ಸಾಲದು: ಬಿಜೆಪಿ ನಾಯಕರು ಕ್ಷಮೆ ಯಾಚಿಸಬೇಕು: ಮಿಥುನ್ ರೈ

Prasthutha|

ಮಂಗಳೂರು: ನಾರಾಯಣ ಗುರುಗಳ ವಿಚಾರ ಸಮಾಜವಿಜ್ಞಾನ ಪಾಠದಲ್ಲಿ ಮರುಸೇರ್ಪಡೆಗೊಳಿಸಲಾಗಿದೆ. ಆದರೆ, ಈ ಹಿಂದೆ ಪಠ್ಯಪುಸ್ತಕದ ಬಗ್ಗೆ ಬಿಜೆಪಿಗರು ಹಲವು ಬಾರಿ ಸುಳ್ಳು ಹೇಳಿಕೆ ನೀಡಿದ್ದರು. ಆ ಬಗ್ಗೆ ನಾಡಿನ ಜನತೆಯೊಂದಿಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹಾಗೂ ಸುನೀಲ್ ಕುಮಾರ್ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಮಿಥುನ್ ರೈ ಆಗ್ರಹಿಸಿದ್ದಾರೆ.

- Advertisement -

ನಾರಾಯಣ ಗುರು ಪಠ್ಯ ತೆಗೆದ ವಿಚಾರಕ್ಕೆ ವಿವಾದವಾದಗ ಬಿಜೆಪಿಗರು ಸುಳ್ಳು ಹೇಳಿದ್ದರು. ನಾರಾಯಣ ಗುರು ಪಠ್ಯ ಸಮಾಜವಿಜ್ಞಾನ ಪುಸ್ತಕದಿಂದ ತೆಗೆದಿಲ್ಲ ಎಂದು ಹೇಳಿದ್ದರು. ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್ ಪಠ್ಯವನ್ನು ತೆಗೆದಿಲ್ಲ ಎಂದಿದ್ದರು. ಆದರೆ ಇದೀಗ ಶಿಕ್ಷಣ ಸಚಿವರು ಸಮಾಜ ಪಠ್ಯದಲ್ಲಿ ಸೇರಿಸಿದ್ದೇವೆ ಎಂದಿದ್ದಾರೆ. ಹಾಗಾದರೆ ಸುಳ್ಳು ಹೇಳಿಕೆ ನೀಡಿದ ಸಚಿವರು ಕ್ಷಮೆಯಾಚನೆ ಮಾಡಬೇಕು ಎಂದು ಮಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ ಮಿಥುನ್ ರೈ ಆಗ್ರಹಿಸಿದ್ದಾರೆ

Join Whatsapp