Home ಟಾಪ್ ಸುದ್ದಿಗಳು ಬಿಜೆಪಿ ಮುಖಂಡ ಆತ್ಮಹತ್ಯೆ ಪ್ರಕರಣ: ಹನಿಟ್ರ್ಯಾಪ್ ಆರೋಪಿ ರೇಖಾ ಬಂಧನ

ಬಿಜೆಪಿ ಮುಖಂಡ ಆತ್ಮಹತ್ಯೆ ಪ್ರಕರಣ: ಹನಿಟ್ರ್ಯಾಪ್ ಆರೋಪಿ ರೇಖಾ ಬಂಧನ

ಬೆಂಗಳೂರು: ಬಿಜೆಪಿ ಮುಖಂಡ ಬಿ. ಪಿ. ಅನಂತ ರಾಜು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿ ಹನಿಟ್ರ್ಯಾಪ್ ಬ್ಲಾಕ್ಮೇಲ್ ಆರೋಪಿ ರೇಖಾಳನ್ನು ಪೊಲೀಸರು ಬಂಧಿಸಿದ್ದಾರೆ.


ಮೇ 12ರಂದು ರಾತ್ರಿ ಅನಂತ ರಾಜು ತಮ್ಮ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಾಥಮಿಕ ತನಿಖೆಯಲ್ಲಿ ಥೈರಾಯ್ಡ್ ಸಮಸ್ಯೆಗೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಆದರೆ ಅವರ ಮನೆಯಲ್ಲಿ ಡೆತ್ ನೋಟ್ ಸಿಕ್ಕಿದ್ದು ‘ಹನಿ ಟ್ರ್ಯಾಪ್’ ತಂಡದ ಬೆದರಿಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಅನಂತ ರಾಜು ಪತ್ನಿ ಸುಮಾ ಬ್ಯಾಡರ ಹಳ್ಳಿ ಪೊಲೀಸರಿಗೆ ದೂರು ನೀಡಿದ್ದು, ‘ಹಲವು ವರ್ಷಗಳ ಹಿಂದೆ ಫೇಸ್ ಬುಕ್ ನಲ್ಲಿ ನನ್ನ ಪತಿಗೆ ರೇಖಾ ಪರಿಚಯ ಆಗಿದ್ದರು. ಬಳಿಕ ರೇಖಾ ಖಾಸಗಿ ವೀಡಿಯೋ ಮಾಡಿಟ್ಟುಕೊಂಡಿದ್ದರು.


ವೀಡಿಯೋಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹಾಕುವುದಾಗಿ ಬೆದರಿಸಿದ ರೇಖಾ, ಆಕೆಯ ಗಂಡ ವಿನೋದ್, ಸ್ಪಂದನಾ ಮೂವರು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಜತೆಗೆ ರಾಜಕೀಯ ನಾಯಕರಿಗೆ ವೀಡಿಯೋ ಕಳಿಸಿ ರಾಜಕೀಯ ಜೀವನಕ್ಕೆ ಅಡ್ಡಿ ಮಾಡುವುದಾಗಿಯೂ ಬೆದರಿಸಿದ್ದರು. ಈ ವಿಚಾರವನ್ನು ಹಲವು ಬಾರಿ ಪತಿ ತನ್ನ ಬಳಿ ಹಂಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಅಷ್ಟೇ ಅಲ್ಲದೆ ಕಳೆದ ಒಂದೂವರೆ ತಿಂಗಳಿನಿಂದ ರೇಖಾ ಹಾಗೂ ಇತರರು ಪುನಃ ಅವರನ್ನು ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ರೇಖಾಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Join Whatsapp
Exit mobile version