ಕಾಂಗ್ರೆಸ್ ಶಾಸಕನಿಗೆ ಕೇಸರಿ ಶಾಲು ಹಾಕಿದ ಬಿಜೆಪಿಗರು..!

Prasthutha|

ಬೆಂಗಳೂರು: ರಾಷ್ಟ್ರಪತಿ ಚುನಾವಣೆಗೆ ಮತದಾನ ಮಾಡಲು ಬಂದ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಅವರಿಗೆ ಬಿಜೆಪಿ ಶಾಸಕರು ಕೇಸರಿ ಶಾಲು ಹಾಕಿದ ಘಟನೆ ಇಂದು ವಿಧಾನ ಸೌಧದಲ್ಲಿ ನಡೆದಿದೆ.

- Advertisement -


ಬೈರತಿ ಸುರೇಶ್ ಅವರು ಮತದಾನ ಮಾಡಿ ವಾಪಸ್ ಬರುತ್ತಿದ್ದಾಗ ಬಿಜೆಪಿ ಶಾಸಕರಾದ ರಾಜೂಗೌಡ, ಗೂಳಿಹಟ್ಟಿ ಶೇಖರ್, ಎಂ.ಪಿ. ರೇಣುಕಾಚಾರ್ಯ ಮುಖಾಮುಖಿಯಾದರು. ಈ ಸಂದರ್ಭ ರಾಜೂಗೌಡ ತಮ್ಮ ಹೆಗಲ ಮೇಲಿದ್ದ ಕೇಸರಿ ಶಾಲನ್ನು ತೆಗೆದು ಬೈರತಿ ಸುರೇಶ್ ಅವರ ಹೆಗಲಿಗೆ ಹಾಕಿದರು.


ತಕ್ಷಣ ಸುರೇಶ್ ಅವರು ಅದನ್ನು ತೆಗೆದು ವಾಪಸ್ ನೀಡಿದ್ದಾರೆ.

Join Whatsapp