Home ಟಾಪ್ ಸುದ್ದಿಗಳು ರಾಜಕೀಯ ಸೇಡು ತೀರಿಸಿಕೊಳ್ಳಲು ಬಿಜೆಪಿಯಿಂದ ಇ.ಡಿ ದುರ್ಬಳಕೆ: ಕೊಡಗು ಜಿಲ್ಲಾ ಕಾಂಗ್ರೆಸ್

ರಾಜಕೀಯ ಸೇಡು ತೀರಿಸಿಕೊಳ್ಳಲು ಬಿಜೆಪಿಯಿಂದ ಇ.ಡಿ ದುರ್ಬಳಕೆ: ಕೊಡಗು ಜಿಲ್ಲಾ ಕಾಂಗ್ರೆಸ್

ಮಡಿಕೇರಿ: ಕೇಂದ್ರ ಸರ್ಕಾರವು  ತನ್ನರಾಜಕೀಯ ಸೇಡು ತೀರಿಸಿಕೊಳ್ಳಲು  ಜಾರಿ ನಿರ್ದೇಶನಾಲಯವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಯಿತು.

ಪಕ್ಷದ ಮುಖಂಡರಾದ ವೀಣಾ ಅಚ್ಚಯ್ಯ ಮಾತನಾಡಿ, ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ. ರಾಹುಲ್ ಗಾಂಧಿ ಅವರಿಗೆ ವಿನಾ ಕಾರಣ ತೊಂದರೆ ಕೊಡುತ್ತಿದೆ. ತನ್ನ ತಪ್ಪನ್ನು ಮುಚ್ಚಿಕೊಳ್ಳುವ ನಿಟ್ಟಿನಲ್ಲಿ ಜನರ ಗಮನ ಬೇರೆಡೆ ಸೆಳೆಯಲು ಪ್ರವಾದಿ ನಿಂದನೆ, ಮಸೀದಿ ಮಂದಿರ ವಿವಾದ ಮುಂತಾದ  ಜನಸಾಮಾನ್ಯರಿಗೆ ತೊಂದರೆ ಕೊಡುವಂತಹ ಅನೇಕ ಹೇಯ ಕೃತ್ಯಗಳನ್ನು ಬಿಜೆಪಿ ಮಾಡುತ್ತಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ‌ಧರ್ಮಜ ಉತ್ತಪ್ಪ, ಮುಖಂಡರಾದ ಮುನೀರ್ ಅಹಮ್ಮದ್, ಕೆ.ಕೆ.ಮಂಜುನಾಥ, ತನ್ನೀರ ಮೈನಾ, ಟಿ.ಪಿ.ರಮೇಶ್, ಮಿಥುನ್ ಗೌಡ, ನೆರವಂಡ ಉಮೇಶ್, ಸೂರಜ್  ಮುಂತಾದವರ ಉಪಸ್ಥಿತಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರಿಗೆ ಮನವಿ‌ ಸಲ್ಲಿಸಲಾಯಿತು.

Join Whatsapp
Exit mobile version