‘ಸಾಯುವವನು ಎಲ್ಲಿ ಬೇಕಾದರೂ ಸಾಯಲಿ’ : ಬಿಜೆಪಿ ಶಾಸಕ ಚಂದ್ರಪ್ಪ ವಿವಾದತ್ಮಕ ಹೇಳಿಕೆ

Prasthutha|

ಚಿತ್ರದುರ್ಗ: ಸಾಯುವವನು ಎಲ್ಲಿ ಬೇಕಾದರೂ ಸಾಯಲಿ. ನಾನು ಇಲ್ಲಿ ಕೋವಿಡ್ ಸೆಂಟರ್ ಮಾಡಲ್ಲ ಎಂದು ಚಿತ್ರದುರ್ಗ ಜಿಲ್ಲೆ ಹೊಳೆಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಚಂದ್ರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಸೆಂಟರ್ ನಿರ್ಮಾಣದ ಬಗ್ಗೆ ಕೇಳಲಾದ ಪ್ರಶ್ನೆಗೆ ಶಾಸಕ ಎಂ.ಚಂದ್ರಪ್ಪ, ಡಿಹೆಚ್‍ಓ ಡಾ.ಪಾಲಾಕ್ಷಗೆ ನೀಡಿರುವ ಹೇಳಿಕೆಯೊಂದು ಈಗ ವಿವಾದಕ್ಕೆ ಕಾರಣವಾಗಿದೆ.

- Advertisement -

ಚಿತ್ರದುರ್ಗದ ನೂತನ ರೆಸಿಡೆನ್ಷಿಯಲ್ ಶಾಲೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಮಾರ್ಪಾಡು ಮಾಡುವ ಬಗ್ಗೆ ಕೇಳಲಾದ ಪ್ರಶ್ನೆಗೆ ಚಂದ್ರಪ್ಪ ಹೀಗೆ ಪ್ರತಿಕ್ರಿಯೆ ನೀಡಿದ್ದು, ಸಾಯುವವನು ಎಲ್ಲಿ ಬೇಕಾದರೂ ಸಾಯಲಿ. ನಾನು ಇಲ್ಲಿ ಕೋವಿಡ್ ಸೆಂಟರ್ ಮಾಡಲ್ಲ. ನನಗೆ ಅದರ ಅವಶ್ಯಕತೆ ಇಲ್ಲ ಎಂದು ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ.

Join Whatsapp