ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ನಿಷೇಧಿತ ಚಾರ್ಮಾಡಿ ರಸ್ತೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರಯಾಣ

Prasthutha|

ಮಂಗಳೂರು: ಚಾರ್ಮಾಡಿ ರಸ್ತೆಯಲ್ಲಿ ಸಂಚಾರ ನಿಷೇಧವಿದ್ದರೂ, ಶಾಸಕ ಹರೀಶ್ ಪೂಂಜಾ ಜಿಲ್ಲಾಡಳಿತ ಆದೇಶ ಉಲ್ಲಂಘನೆ ಮಾಡಿರುವ ಘಟನೆ ತಡರಾತ್ರಿ ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ನಡೆದಿದೆ.

- Advertisement -

ಸಂಜೆ 7 ರಿಂದ ಬೆಳಗ್ಗೆ 6 ಗಂಟೆ ವರೆಗೆ ಚಾರ್ಮಾಡಿಯಲ್ಲಿ ಸಂಚಾರ ನಿಷೇಧ ಮಾಡಲಾಗಿದೆ. ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿಯಿಂದ ಬೆಂಗಳೂರಿಗೆ ಚಾರ್ಮಾಡಿ ಮೂಲಕ ಸಂಚಾರ ಮಾಡಿದ್ದರು.ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೋಲಿಸರು ತಡೆದಿದ್ದರು, ಶಾಸಕ ಪೂಂಜಾ ಹಿರಿಯ ಅಧಿಕಾರಿಗಳಿಗೆ ಕರೆ ಇಂಪ್ಲೈನ್ಸ್ ಮೂಲಕವೇ ನಿಷೇಧವಿರುವ ರಸ್ತೆಯಲ್ಲೇ ಪ್ರಯಾಣಿಸಿದರು. ನಿಯಮ ಉಲ್ಲಂಘಿಸಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ವಿರುದ್ಧ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.

Join Whatsapp