ಬಂಧನದ ಭೀತಿ : ತಲೆ ಮರೆಸಿಕೊಂಡ ಬಿಜೆಪಿ ಶಾಸಕ ಮುನಿರತ್ನ

Prasthutha|

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕೊಲೆ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬೆಂಗಳೂರು ವೈಯಾಲಿಕಾವಲ್ ಪೊಲೀಸ್ ಠಾಣೆ ಯಲ್ಲಿ ಎಫ್ ಐಆರ್ ದಾಖಲಾಗಿದೆ.

- Advertisement -


ಸದ್ಯ ಮುನಿರತ್ನ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.


ಬಿಜೆಪಿ ಶಾಸಕ ಮುನಿರತ್ನ ರಿಂದ ಜಾತಿ ನಿಂದನೆ ವಿಚಾರವಾಗಿ ಶಾಸಕ ಮುನಿರತ್ನ ಅವರು ಬಂಧನ ಭೀತಿ ಎದುರಿಸುವಂತಾಗಿದ್ದು, ಎರಡು ಸಮುದಾಯಗಳ ನಿಂದನೆ ಕೇಸ್ ನಿಂದ ಮುನಿರತ್ನ ವಿರುದ್ಧ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅತ್ತ ಕಾಂಗ್ರೆಸ್ನಿಂದಲೂ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಡ ಕೇಳಿ ಬಂದಿದೆ. ಮುನಿರತ್ನ ಅವರದ್ದು ಎನ್ನಲಾದ ಆಡಿಯೋ ಲೀಕ್ ಆದ ಬೆನ್ನಲ್ಲೇ ಸ್ವಪಕ್ಷದ ದಲಿತ ನಾಯಕರೂ ಕೂಡ ಮುನಿರತ್ನ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

- Advertisement -


ಈ ಆರೋಪಕ್ಕೆ ಸಂಬಂಧಿಸಿದಂತೆ ಮುನಿರತ್ನ ನಿನ್ನೆಯಿಂದಲೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಡದೇ ದೂರ ಉಳಿದುಕೊಂಡಿದ್ದಾರೆ. ರಹಸ್ಯ ಸ್ಥಳದಲ್ಲಿ ಇದ್ದುಕೊಂಡು ತಮ್ಮ ವಕೀಲರ ಜೊತೆ ಮುನಿರತ್ನ ಚರ್ಚೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕಾನೂನು ಹೋರಾಟ ಹಾಗೂ ಜಾತಿ ನಿಂದನೆ ಆರೋಪದಿಂದ ಹೊರಗೆ ಬರಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.



Join Whatsapp
Exit mobile version