Home ಟಾಪ್ ಸುದ್ದಿಗಳು ಕಾಂಗ್ರೆಸ್ ಗೆಲುವಿಗೆ ಸಹಕರಿಸುವಂತೆ ಬೆಂಬಲಿಗರಿಗೆ ಸೂಚಿಸಿದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್

ಕಾಂಗ್ರೆಸ್ ಗೆಲುವಿಗೆ ಸಹಕರಿಸುವಂತೆ ಬೆಂಬಲಿಗರಿಗೆ ಸೂಚಿಸಿದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್

ಕೆಂಗೇರಿ:ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಿದ್ದ ಯಶವಂತಪುರದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಕಾಂಗ್ರೆಸ್ ಗೆಲುವಿಗೆ ಸಹಕರಿಸುವಂತೆ ತಮ್ಮ ಬೆಂಬಲಿಗರಿಗೆ ಸೂಚಿಸಿದ್ದಾರೆ. ಉಪನಗರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ.

ಕ್ಷೇತ್ರದಿಂದ ಕ್ಷೇತ್ರಕ್ಕೆ ಹಾರುವ ವಲಸಿಗರನ್ನು ಹಾಗೂ ಕ್ಷೇತ್ರದಿಂದಲೇ ತಿರಸ್ಕೃತರಾದ ಅಭ್ಯರ್ಥಿಗಳನ್ನು ಒಪ್ಪಿಕೊಳ್ಳಲು ಯಶವಂತಪುರ ಕ್ಷೇತ್ರ ಪುಕ್ಸಟ್ಟೆ ಬಿದ್ದಿದೆಯೇ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ತಮ್ಮ ಬೆಂಬಲಿಗರ ಮೂಲಕ ‘ಗೋ ಬ್ಯಾಕ್ ಶೋಭಾ’ ಎಂದು ಘೋಷಣೆಯನ್ನೂ ಕೂಗಿಸಿದ್ದಾರೆ.

‘ನಾನು ಯಾವುದೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರಲಿಲ್ಲ. ಕ್ಷೇತ್ರದ ಅಭಿವೃದ್ದಿಗಾಗಿ ಹಾಗೂ ಅನುದಾನಕ್ಕಾಗಿ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರೊಂದಿಗೆ ಸಮನ್ವಯ ಸಾಧಿಸಿದೆ. ಕುಡಿಯುವ ನೀರು ಹಾಗೂ ಯುಜಿಡಿ ಕಾಮಗಾರಿಗೆ ₹27 ಕೋಟಿಗೂ ಅಧಿಕ ಅನುದಾನ ಪಡೆದಿದ್ದೇನೆ. ಇದನ್ನೇ ಅನುಮಾನದಿಂದ ನೋಡಲಾಯಿತು. ಚುನಾವಣೆಯ ಸಮಯದಲ್ಲಿ ನನ್ನ ಸೋಲಿಗೆ ಬಿಜೆಪಿ ಸ್ಥಳೀಯ ನಾಯಕರೇ ಪ್ರಯತ್ನಿಸಿದರು. ಅವರ ವಿರುದ್ಧ ದೂರು ಸಲ್ಲಿಸಿದರೂ ಕ್ರಮವಾಗಲಿಲ್ಲ. ಸ್ಥಳೀಯ ನಾಯಕರಿಂದಲೇ ಪಕ್ಷ ವಿರೋಧಿ ಚಟುವಟಿಕೆಯಾಗುತ್ತಿದೆ ಎಂದು ಅವರು ದೂರಿದ್ದಾರೆ.

Join Whatsapp
Exit mobile version