ಸಿ ಎಂ ಕಚೇರಿಯಿಂದ ಪತ್ರಕರ್ತರಿಗೆ ನಗದು ಉಡುಗೊರೆ : ಸೂಕ್ತ ತನಿಖೆಗೆ ಬಿಜೆಪಿ ಎಮ್ ಎಲ್ ಸಿ ಎಚ್ ವಿಶ್ವನಾಥ್ ಆಗ್ರಹ

Prasthutha|

ಮೈಸೂರು: ಮುಖ್ಯಮಂತ್ರಿ ಕಛೇರಿಯಿಂದ ದೀಪಾವಳಿ ಪ್ರಯುಕ್ತ ಕೆಲವು ಪತ್ರಕರ್ತರಿಗೆ ಹಣದ ಕಂತೆಯ ಉಡುಗೊರೆಯನ್ನು ನೀಡಿರುವುದರ ಕುರಿತು ಸೂಕ್ತ ತನಿಖೆಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎ ಎಚ್ ವಿಶ್ವನಾಥ್ ಆಗ್ರಹಿಸಿದ್ದಾರೆ.

- Advertisement -

ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ ಅವರು ,ನಗದು ಉಡುಗೊರೆ ಕೊಟ್ಟಿರುವುದು ಮಾಧ್ಯಮ ಲೋಕಕ್ಕೆ ಮಾಡಿರುವ ಅಪಮಾನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತರಿಗೆ ಸ್ವೀಟ್ ಬಾಕ್ಸ್ ಜತೆ ಹಣ ನೀಡಿರುವುದು ಒಪ್ಪಲಸಾಧ್ಯ. ಈ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಬೇಕು. ಅವರ ಮಾಧ್ಯಮ ಕಾರ್ಯದರ್ಶಿಯನ್ನು ಕೂಡಲೇ ಹೊರ ಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ.

- Advertisement -

ಕನ್ನಡದ ಮಾಧ್ಯಮಗಳಿಗೆ ಅದರದ್ದೇ ಆದ ಗೌರವ, ಪ್ರತಿಷ್ಠೆ ಇದೆ. ಈ ಬಗೆಯಲ್ಲಿ ಭ್ರಷ್ಟಾಚಾರಕ್ಕೆ ಅನುವು ಮಾಡಿ ಕೊಡುವುದು ಸಮಂಜಸವಲ್ಲ. ಪತ್ರಕರ್ತರಿಗೆ ಆಮಿಷ ಒಡ್ಡಿರುವುದನ್ನು ಗಮನಿಸಿದರೆ ಮುಂಬರುವ ಚುನಾವಣೆಗೆ ಈಗಲೇ ಹಣ ಹೂಡಿಕೆ ಆರಂಭವಾಯಿತೇ ಎಂಬ ಪ್ರಶ್ನೆ ಮೂಡಿದೆ. ಹಾಗಾಗಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Join Whatsapp