ಲೈಂಗಿಕ ದೌರ್ಜನ್ಯ: ಬಿಜೆಪಿ ಎಂಎಲ್ ಸಿಯ ಪತ್ನಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

Prasthutha|

ಮುಂಬೈ: ಬೀಡ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಿಜೆಪಿ ಎಂಎಲ್ ಸಿಯ ಪತ್ನಿ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಪ್ರಕರಣ ಕುರಿತು ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆ ರೂಪಾಲಿ ಚಕಂಕರ್ ಭಾನುವಾರ ಒತ್ತಾಯಿಸಿದ್ದಾರೆ.

- Advertisement -


ಈ ಬಗ್ಗೆ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಅವರು”ಬೀಡು ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿರುವ ಬಗ್ಗೆ ತಿಳಿದು ಬಂದಿದೆ. ಈ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿಯಿಂದ ಘಟನೆಯ ವಿವರಗಳನ್ನು ಖುದ್ದಾಗಿ ಕೇಳಿದ್ದೇನೆ. ಪ್ರಜಕ್ತ ಸುರೇಶ್ ಧಾಸ್, ರಘು ಪವಾರ್ ಮತ್ತು ರಾಹುಲ್ ಜಗದಾಳೆ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯು ಅತಿರೇಕದ ಸಂಗತಿಯಾಗಿದ್ದು, ಕೂಡಲೇ ಮುಂದಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ” ಎಂದು ಹೇಳಿದ್ದಾರೆ.

Join Whatsapp