ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದೋಸೆ ತಿನ್ನಲಷ್ಟೇ ಲಾಯಕ್ಕು: ಕಾಂಗ್ರೆಸ್

Prasthutha|

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ದೋಸೆ ತಿನ್ನಲಷ್ಟೇ ಲಾಯಕ್ಕು ಎಂದು ಕಾಂಗ್ರೆಸ್ ಕಿಡಿಗಾರಿದೆ.

- Advertisement -


ತೇಜಸ್ವಿ ಸೂರ್ಯ ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿಯನ್ನು ಉಲ್ಲೇಖಿಸಿ, ಕಾಂಗ್ರೆಸ್ ನವರು ನಿನ್ನೆ ಪತ್ರಿಕಾಗೋಷ್ಠಿ ನಡೆಸಿ ನನ್ನ ಮನೆಗೆ ಮಸಾಲ ದೋಸೆ ಪಾರ್ಸೆಲ್ ಕಳುಹಿಸಿರುವುದಾಗಿ ಹೇಳಿದ್ದರು. 24 ಗಂಟೆ ಕಳೆದರೂ ದೋಸೆ ಬಂದಿಲ್ಲ. ಎಂದಿನಂತೆ ಈ ವಿಚಾರದಲ್ಲೂ ಮೋಸ ಮಾಡಿದ್ದಾರೆ. ಸರಿಯಾಗಿ ದೋಸೆಯನ್ನೇ ಕಳುಹಿಸಲಾಗದ ಅವರು ಉತ್ತಮ ಆಡಳಿತ ನೀಡುವ ಕನಸು ಕಾಣುತ್ತಿದ್ದಾರೆ ಎಂದು ಟ್ವೀಟ್ ಮಾಡಿ ತಿರುಗೇಟು ನೀಡಿದ್ದರು.


ತೇಜಸ್ವಿ ಸೂರ್ಯ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ‘ಬೆಳ್ಳಂದೂರಿನಲ್ಲಿ ಜನ ಮುಳುಗಿದರೆ ನಾನೇನು ಮಾಡಲಿ ಎನ್ನುವ ಕೆಲಸಕ್ಕೆ ಬಾರದ ಸಂಸದ ತೇಜಸ್ವಿ ಸೂರ್ಯ ಅವರು ನಿರುದ್ಯೋಗಿಯಾಗಿದ್ದಾರೆ. ಕಾಂಗ್ರೆಸ್ ಕಳುಹಿಸಿದ ದೋಸೆಗಾಗಿ 24 ಗಂಟೆ ಬಾಯಲ್ಲಿ ನೀರು ಸುರಿಸಿಕೊಂಡು ಕಾಯುವಷ್ಟು ಒಬ್ಬ ಸಂಸದನಿಗೆ ಪುರುಸೊತ್ತಿದೆ ಎಂದಾದರೆ ಅವರು ದೋಸೆ ತಿನ್ನಲಷ್ಟೇ ಲಾಯಕ್ಕು. ಬಿಟ್ಟಿ ತಿನ್ನೋದಷ್ಟೇ ಬಿಜೆಪಿ ಕಾಯಕವೇ!?’ ಎಂದು ಪ್ರಶ್ನಿಸಿದೆ.



Join Whatsapp