ಬಿಜೆಪಿ, ಎನ್ ಡಿಎ ನಾಯಕರಿಂದ ಹೆಣ್ಣುಮಕ್ಕಳ ರಕ್ಷಣೆ ಮಾಡುವ ಪರಿಸ್ಥಿತಿ ಬಂದಿದೆ: ಬಿ.ವಿ ಶ್ರೀನಿವಾಸ್

Prasthutha|

ನವದೆಹಲಿ: ಬಿಜೆಪಿ, ಎನ್ ಡಿಎ ನಾಯಕರಿಂದ ಹೆಣ್ಣುಮಕ್ಕಳ ರಕ್ಷಣೆ ಮಾಡುವ ಪರಿಸ್ಥಿತಿ ಬಂದಿದೆ ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಗಂಭೀರ ಆರೋಪ ಮಾಡಿದ್ದಾರೆ.

- Advertisement -


ಪ್ರಜ್ವಲ್ ರೇವಣ್ಣ ಕುರಿತು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರು ಅಮಿತ್ ಶಾ ಹಾಗೂ ಮೋದಿ ನೆರವಿನಿಂದ ವಿದೇಶಕ್ಕೆ ತೆರಳಿದ್ದು, ಅವರ ಕೈ ಹಿಡಿಯುವ ಕೆಲಸ ಬಿಜೆಪಿ ಮಾಡಿದೆ. ಅವರು ವಾಪಸ್ ಬರಲು ವಿಳಂಬ ಆಗುತ್ತಿರುವುದಕ್ಕೂ ಕಾರಣ ಬಿಜೆಪಿ. ಇದು ಬಿಜೆಪಿ ರಾಜಕೀಯ ಷಡ್ಯಂತ್ರ. ಮೊದಲು ಪೆನ್ ಡ್ರೈವ್ ಬಿಜೆಪಿ ನಾಯಕರಿಗೆ ಸಿಕ್ಕಿತ್ತು. ಅದನ್ನು ಲೀಕ್ ಮಾಡಿದ್ದು ಬಿಜೆಪಿ ನಾಯಕರು. ಬಿಜೆಪಿಗೆ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವುದು ಗುರಿ. ಈಗ ಮೈತ್ರಿ ಮಾಡಿಕೊಂಡು ಜೆಡಿಎಸ್ ಮುಗಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಪಂಜಾಬ್, ಮಹಾರಾಷ್ಟ್ರ ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳನ್ನು ಮುಗಿಸಿದ್ದಾರೆ. ಈ ವಿಚಾರದಲ್ಲಿ ಮೋದಿ ಅವರ ಮೌನ ಯಾಕೆ? ಇತಿಹಾಸದಲ್ಲಿ ಈ ರೀತಿಯ ಘಟನೆ ನೋಡಿರಲಿಲ್ಲ. ಆದರೆ ಮೋದಿ ಅವರು ವೇದಿಕೆಗೆ ಬಂದು ಪ್ರಜ್ವಲ್ ಗೆ ಮತ ನೀಡಿದರೆ ನನ್ನನ್ನು ಬಲಪಡಿಸಿದಂತೆ ಎಂದು ಹೇಳುತ್ತಾರೆ ಎಂದರು.

Join Whatsapp