ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಮತ್ತೊಮ್ಮೆ ಗೆದ್ದು ಅಧಿಕಾರ ಉಳಿಸಿಕೊಂಡಿದೆ: ನಳಿನ್ ಕುಮಾರ್ ಕಟೀಲ್

Prasthutha|

ಮಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳ ಫಲಿತಾಂಶವು ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಮತ್ತೊಮ್ಮೆ ಗೆದ್ದು ಅಧಿಕಾರ ಉಳಿಸಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

- Advertisement -

ಈ ಕುರಿತು ಮಂಗಳೂರಿನಲ್ಲಿ ಮಾತನಾಡಿದ ಅವರು, ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಮತ್ತೊಮ್ಮೆ ಗೆದ್ದು ಅಧಿಕಾರ ಉಳಿಸಿಕೊಂಡಿದೆ. ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಪಡೆದಿದ್ದು,  ಒಟ್ಟಾರೆ ರಾಜ್ಯದ ಫಲಿತಾಂಶದಲ್ಲಿ ಕಳೆದ ಬಾರಿಗಿಂತ ಉತ್ತಮ ಫಲಿತಾಂಶ ಸಿಕ್ಕಿದೆ ಎಂದು ಹೇಳಿದ್ದಾರೆ.

ಈ ಚುನಾವಣೆ ಸ್ಥಳೀಯವಾದ ಕಾರಣ ಅಭ್ಯರ್ಥಿಗಳು, ವಿಷಯಗಳು ಸ್ಥಳೀಯವಾಗಿರುತ್ತೆ. ಹಾಗಾಗಿ ಇದು ಸ್ಥಳೀಯವಾಗಿ ಸಂಬಂಧಿಸಿದ ಚುನಾವಣೆಯಾಗಿದೆ. ಒಬ್ಬ ಪಕ್ಷೇತರ ನಿಂತರೂ ಓಟುಗಳು ವ್ಯತ್ಯಾಸವಾಗುತ್ತೆ, ಫಲಿತಾಂಶ ವಿರುದ್ಧ ಬರುತ್ತೆಆದರೂ ಉತ್ತಮವಾದ ಫಲಿತಾಂಶ ಬಿಜೆಪಿಗೆ ಸಿಕ್ಕಿದೆ ಎಂದು ಹೇಳಿದರು.

- Advertisement -

ಚಿಕ್ಕಮಗಳೂರು, ಉತ್ತರ ಕರ್ನಾಟಕ ಭಾಗದ ಕೆಲವೆಡೆ ಈ ಬಾರಿ ಗೆದ್ದಿದ್ದೇವೆ. ಈ ಫಲಿತಾಂಶ ಖಂಡಿತವಾಗಿಯೂ ವಿಧಾನಸಭೆ ಚುನಾವಣೆಯ ದಿಕ್ಸೂಚಿ ಅಲ್ಲ. ಗ್ರಾ.ಪಂ, ಪ.ಪಂಗಳು ಯಾವುದೇ ಚುನಾವಣೆಯ ದಿಕ್ಸೂಚಿ ಆಗಲ್ಲ. ಇದರಲ್ಲಿ ಲೋಕಲ್ ಸಮಸ್ಯೆ, ಲೋಕಲ್ ವಿಷಯ, ಲೋಕಲ್ ಅಭ್ಯರ್ಥಿಗಳಿರುತ್ತಾರೆ. ಇದು ಅಲ್ಲಲ್ಲೇ ನಡೆಯುವ ಚುನಾವಣೆ, ಯಾವುದೇ ಚುನಾವಣೆ ದಿಕ್ಸೂಚಿ ಅಲ್ಲ ಆದರೂ ಬಿಜೆಪಿ ಒಳ್ಳೆಯ ಫಲಿತಾಂಶ ಕೊಟ್ಟಿದೆ  ಎಂದು ತಿಳಿಸಿದರು.

Join Whatsapp