ಚನ್ನಪಟ್ಟಣ | ಗಣೇಶ ಮೂರ್ತಿ ವಿಸರ್ಜನೆ ಸಂದರ್ಭ ಮಹಿಳೆಗೆ ಲೈಂಗಿಕ ಕಿರುಕುಳ: ಬಿಜೆಪಿ ಅಧ್ಯಕ್ಷನ ವಿರುದ್ಧ ಪ್ರಕರಣ

Prasthutha|

ಚನ್ನಪಟ್ಟಣ: ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ, ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ ತೂಬಿನಕೆರೆಯ ಟಿ.ಎಸ್. ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -


ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ, ಗಣೇಶ ಹಬ್ಬದ ಸಲುವಾಗಿ ತವರು ಮನೆಗೆ ಬಂದಿದ್ದರು. ಸೆ. 7ರಂದು ಗ್ರಾಮದಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಸಲುವಾಗಿ ಮೆರವಣಿಗೆ ನಡೆಯುವಾಗ ಮಹಿಳೆ ರಾತ್ರಿ 11.40ರ ಸುಮಾರಿಗೆ ತಾಯಿಯೊಂದಿಗೆ ಮನೆ ಮುಂದೆ ನಿಂತಿದ್ದರು. ತಾಯಿ ಕಾರ್ಯನಿಮಿತ್ತ ಒಳಕ್ಕೆ ಹೋಗಿದ್ದರು. ಮಹಿಳೆ ಒಬ್ಬರೇ ಇದ್ದಿದ್ದನ್ನು ಗಮನಿಸಿ ಅವರತ್ತ ಬಂದಿದ್ದ ರಾಜು, ‘ಯಾವಾಗ ಬಂದೆ ಬೇಬಿ’ ಎಂದು ಕೇಳಿದ್ದ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.


ಮೊಬೈಲ್ ಫೋನ್ ನಿಂದ ಮಹಿಳೆಯ ಫೋಟೊ ತೆಗೆದು ತನ್ನ ಸ್ನೇಹಿತರಿಗೆ ಕಳಿಸಿದ್ದ. ಈ ಕುರಿತು ಮಹಿಳೆ ಪ್ರಶ್ನಿಸಿದಾಗ, ‘ನನ್ನ ಮೊಬೈಲ್, ನನ್ನಿಷ್ಟ’ ಎಂದು ರಾಜು ಕೆಟ್ಟದಾಗಿ ಪ್ರತಿಕ್ರಿಯಿಸಿದ್ದಾನೆ ಎಂದು ಮಹಿಳೆ ತಿಳಿಸಿದ್ದಾರೆ. ಘಟನೆ ಬೆನ್ನಲ್ಲೇ, ರಾಜು ತಲೆಮರೆಸಿಕೊಂಡಿದ್ದಾನೆ.



Join Whatsapp
Exit mobile version