ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ | ವಾಹನ ಜಖಂ ; ಕೆಲವರಿಗೆ ಗಾಯ

Prasthutha|

ಕೊಲ್ಕತಾ : ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಬೆಂಗಾಲು ವಾಹನದ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರೆನ್ನಲಾದ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲು ನಡ್ಡಾ ಪ್ರಯಾಣಿಸುತ್ತಿದ್ದರು.

- Advertisement -

ಘಟನೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ ಅವರ ಕಾರು ಜಖಂಗೊಂಡಿದೆ. ಕೆಲವು ಮಾಧ್ಯಮ ವಾಹನಗಳಿಗೂ ಹಾನಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ವಿಜಯ್ ವರ್ಗೀಯಾ ಮತ್ತು ಮುಕುಲ್ ರಾಯ್ ಸೇರಿದಂತೆ 10 ಬಿಜೆಪಿ ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.  

ಇಂದು ಬೆಳಗ್ಗೆ ಸಮಾವೇಶ ನಡೆಯುವ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಬಿಜೆಪಿ ಬಾವುಟಗಳನ್ನು ಹರಿದು ಹಾಕಿ, ಬಿಜೆಪಿ ಕಾರ್ಯಕರ್ತರ ಮೇಲೂ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಬಿಜೆಪಿ ನಾಯಕರ ವಾಹನಗಳ ಮೇಲೂ ಕಲ್ಲು ತೂರಾಟ ನಡೆದಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp