ಯತ್ನಾಳ್ ವಿರುದ್ಧ ಬಿಜೆಪಿ ಪ್ರತಿಭಟನೆ

Prasthutha|

ಮಂಡ್ಯ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಮಂಡ್ಯ ಬಿಜೆಪಿ ಸೆಟೆದು ನಿಂತಿದೆ. ಯತ್ನಾಳ್ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಲಘುವಾಗಿ ಮಾತನಾಡಿದ್ದಾರೆ, ತಮ್ಮ ಬಾಯಿಗೆ ಬೀಗ ಹಾಕುವಂತೆ ಅವರಿಗೆ ತಿಳಿಹೇಳಬೇಕು ಎಂದು ಬಿಜೆಪಿ ಕಾರ್ಯಕರ್ತರು ರಾಷ್ಟ್ರೀಯ ಅಧ್ಯಕ್ಷ ಜಗತ್‌ ಪ್ರಕಾಶ್‌ ನಡ್ಡಾ ಅವರಿಗೆ ಅಂಚೆ ಮೂಲಕ ಮನವಿ ರವಾನಿಸಿದ್ದಾರೆ.

- Advertisement -

ನಗರದ ಜಿಲ್ಲಾ ಅಂಚೆ ಕಚೇರಿ ಎದುರು ಸೇರಿದ ಬಿಜೆಪಿ ಕಾರ್ಯಕರ್ತರು ಯತ್ನಾಳ್ ವಿರುದ್ಧ ಘೋಷಣೆ ಕೂಗಿದರು. ನಂತರ ಅಂಚೆ ಮೂಲಕ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯಾಧ್ಯಕ್ಷ ರಿಗೆ ಪತ್ರ ಬರೆದು ಚಳವಳಿ ನಡೆಸಿದರು.

ನಮ್ಮ ನಾಯಕರಾದ ಬಿ.ಎಸ್.ಯಡಿಯೂರಪ್ಪ ವಿರುದ್ಧ ದುರ್ವರ್ತನೆ ತೋರುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ವರಿಷ್ಠರು ಬುದ್ಧಿಹೇಳಬೇಕು. ಇಲ್ಲದಿದ್ದರೆ ಯತ್ನಾಳ್ ಅವರನ್ನು ಸರಿ ದಾರಿಗೆ ತರಲು ಯಡಿಯೂರಪ್ಪರ ಅನುಯಾಯಿಗಳಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Join Whatsapp