ಮುರ್ಮು ಗೆ ಸ್ವಾಗತ ಕೋರಿ ಬ್ಯಾನರ್ ಹಾಕಿ ಮುಜುಗರಕ್ಕೀಡಾದ ಬಿಜೆಪಿ

Prasthutha|

ಧಾರವಾಢ: ರಾಷ್ಟ್ರಪತಿ ಆದ ಬಳಿಕ ಮೊದಲ ಬಾರಿ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸ್ವಾಗತ ಕೋರಿ ಧಾರವಾಡದಲ್ಲಿ ಹಾಕಲಾದ ಬ್ಯಾನರ್ ನಲ್ಲಿ ದ್ರೌಪದಿ ಮುರ್ಮು ಅವರೇ ದೇಶದ ಮೊದಲ ಮಹಿಳಾ ರಾಷ್ಟ್ರಪತಿ ಎಂದು ಬಿಂಬಿಸಿ ಬಿಜೆಪಿ ನಾಯಕರು ಮುಜುಗರಕ್ಕೀಡಾಗಿದ್ದಾರೆ.

- Advertisement -


ಸೆ.26ರಂದು ನಡೆಯಲಿರುವ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸ್ವಾಗತ ಕೋರುವ ಬ್ಯಾನರ್ ಗಳನ್ನು ನಗರದಲ್ಲಿ ಹಾಕಲಾಗಿದ್ದು, ಅದರಲ್ಲಿ ರಾಷ್ಟ್ರದ ಮೊದಲ ಮಹಿಳಾ ರಾಷ್ಟ್ರಪತಿ ಎಂದು ಬರೆಯಲಾಗಿದೆ.


ಪ್ರತಿಭಾ ಪಾಟೀಲ್ ಅವರು ದೇಶದ ಪ್ರಥಮ ಮಹಿಳಾ ರಾಷ್ಟ್ರಪತಿಯಾಗಿದ್ದಾರೆ. ಆದರೆ, ಶಾಸಕ ಅರವಿಂದ ಬೆಲ್ಲದ, ಸಂಸದ ಪ್ರಹ್ಲಾದ ಜೋಶಿ ಸ್ವಾಗತ ಕೋರುವ ಬ್ಯಾನರ್ ನಲ್ಲಿ ದ್ರೌಪದಿ ಮುರ್ಮು ಅವರೇ ದೇಶದ ಮೊದಲ ಮಹಿಳಾ ರಾಷ್ಟ್ರಪತಿ ಎಂದು ಬರೆದು ಅಪಹಾಸ್ಯಕ್ಕೀಡಾಗಿದ್ದಾರೆ. ಇದನ್ನು ನೋಡಿದ ಸಾರ್ವಜನಿಕರು ಶಾಸಕ ಅರವಿಂದ ಬೆಲ್ಲದ ಅವರಿಗೆ ಸಾಮಾನ್ಯ ಜ್ಞಾನವೂ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

- Advertisement -


ದ್ರೌಪದಿ ಮುರ್ಮು ಅವರು ರಾಷ್ಟ್ರದ ಮೊದಲ ಆದಿವಾಸಿ ಮಹಿಳಾ ರಾಷ್ಟ್ರಪತಿಯಾಗಿದ್ದಾರೆ. ಮೊದಲ ಮಹಿಳಾ ರಾಷ್ಟ್ರಪತಿ ಎಂದು ಬ್ಯಾನರ್ ನಲ್ಲಿ ಅಳವಡಿಸಿ ಇತಿಹಾಸ ತಿರುಚುವ ಕೆಲಸಕ್ಕೆ ಮುಂದಾಗಿದ್ದನ್ನು ನೋಡಿದರೆ, ಅರವಿಂದ ಬೆಲ್ಲದ ಅವರು ಮಾನಸಿಕ ಒತ್ತಡಕ್ಕೆ ಒಳಗಾಗಿರುವ ಸಂದೇಹ ಬರುತ್ತಿದೆ’ ಎಂದು ಎನ್.ಎಸ್.ಯು.ಐ ಮಾಜಿ ರಾಜ್ಯ ಕಾರ್ಯದರ್ಶಿ ಮಹಾಂತೇಶ ಕಂಬಾರ ಟೀಕಿಸಿದ್ದಾರೆ.

Join Whatsapp