Home ಟಾಪ್ ಸುದ್ದಿಗಳು ಬಿಜೆಪಿ ಸರ್ಕಾರದಲ್ಲಿ ಒಂದೇ ಒಂದು ಕೋಮುಗಲಭೆ ನಡೆದಿಲ್ಲ, ಅಧಿಕಾರಕ್ಕೋಸ್ಕರ ಬೆಂಕಿ ಹಚ್ಚಿದ್ದು ಕಾಂಗ್ರೆಸ್: ರೇಣುಕಾಚಾರ್ಯ

ಬಿಜೆಪಿ ಸರ್ಕಾರದಲ್ಲಿ ಒಂದೇ ಒಂದು ಕೋಮುಗಲಭೆ ನಡೆದಿಲ್ಲ, ಅಧಿಕಾರಕ್ಕೋಸ್ಕರ ಬೆಂಕಿ ಹಚ್ಚಿದ್ದು ಕಾಂಗ್ರೆಸ್: ರೇಣುಕಾಚಾರ್ಯ

ತುಮಕೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದುವರೆಗೂ ಒಂದೇ ಒಂದು ಕೋಮುಗಲಭೆ ನಡೆದಿಲ್ಲ . ಅಧಿಕಾರಕ್ಕೋಸ್ಕರ ಬೆಂಕಿ ಹಚ್ಚಿದ್ದು ಕಾಂಗ್ರೆಸ್​. ನಮ್ಮದು ದೀಪ ಹಚ್ಚೋ ಸಂಸ್ಕೃತಿ. ಕಾಂಗ್ರೆಸ್​ನವರದ್ದು ಕೊಳ್ಳಿ ಇಡೋ ಸಂಸ್ಕೃತಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಸಂಘ ಪರಿವಾರ ಹಿಂದುತ್ವ, ದೇಶದ ಸಂಸ್ಕೃತಿಯನ್ನ ಉಳಿಸುವಂತ ಕಾರ್ಯ ಮಾಡುತ್ತಿವೆ. ದೇಶಲ್ಲಿ ಎಲ್ಲೇ ವಿಪತ್ತು ಬಂದರೆ ಮೊದಲು ಎದೆ ಕೊಟ್ಟು ನಿಲ್ಲುವುದೇ ಸಂಘ ಪರಿವಾರ. ಐಎಎಸ್, ಕೆಎಎಸ್ ಮಾಡೋರಿಗೆ ಆರ್ ​ಎಸ್‌ ಎಸ್​ನಿಂದ ಇನ್​ಫ್ಲೂಯೆನ್ಸ್ ಮಾಡೋಕಾಗುತ್ತಾ ಅವರವರ ಅರ್ಹತೆ, ಅಂಕಗಳ ಮೇಲೆ ಅವಕಾಶ ಸಿಗುತ್ತೆ ಎಂದು ಹೇಳಿದ್ದಾರೆ.

Join Whatsapp
Exit mobile version